AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಿಲ್ಲ ಸಂಪುಟ ಸರ್ಜರಿ: ಕಾಂಗ್ರೆಸ್ ನಾಯಕರಿಗೆ​ ಹೈಕಮಾಂಡ್​ ಸೂಚನೆ ಏನು?

ಸದ್ಯಕ್ಕಿಲ್ಲ ಸಂಪುಟ ಸರ್ಜರಿ: ಕಾಂಗ್ರೆಸ್ ನಾಯಕರಿಗೆ​ ಹೈಕಮಾಂಡ್​ ಸೂಚನೆ ಏನು?

ಪ್ರಸನ್ನ ಹೆಗಡೆ
|

Updated on:Nov 16, 2025 | 1:54 PM

Share

ರಾಜ್ಯ ಸರ್ಕಾರದ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಎಐಸಿಸಿ ಉನ್ನತ ಮೂಲಗಳು ಖಚಿತಪಡಿಸಿವೆ. ಬೆಳಗಾವಿ ಅಧಿವೇಶನ ಮತ್ತು ಸಂಕ್ರಾಂತಿ ಹಬ್ಬದ ಬಳಿಕವಷ್ಟೇ ಈ ಬಗ್ಗೆ ಚರ್ಚೆ ನಡೆಯಲಿದೆ. ಬಿಹಾರ ಚುನಾವಣಾ ಫಲಿತಾಂಶಗಳ ಪರಾಮರ್ಶೆ ಈ ವಿಳಂಬಕ್ಕೆ ಕಾರಣ ಎನ್ನಲಾಗಿದ್ದು, ಈ ಕುರಿತು ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ.

ಬೆಂಗಳೂರು, ನವೆಂಬರ್​ 16: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಪುನಾರಚನೆ ಅಥವಾ ವಿಸ್ತರಣೆ ಸದ್ಯಕ್ಕೆ ನಡೆಯುವುದಿಲ್ಲ ಎಂದು ಎಐಸಿಸಿ ಉನ್ನತ ಮೂಲಗಳು ಟಿವಿ9 ಕನ್ನಡಕ್ಕೆ ತಿಳಿಸಿವೆ. ಬೆಳಗಾವಿ ಅಧಿವೇಶನ ಮುಗಿದ ನಂತರ ಮತ್ತು ಸಂಕ್ರಾಂತಿ ಹಬ್ಬದ ಬಳಿಕವಷ್ಟೇ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕರು ಬಿಹಾರ ಚುನಾವಣೆ ಸೋಲಿನ ಪರಾಮರ್ಶೆಯಲ್ಲಿ ನಿರತವಾಗಿರುವ ಕಾರಣ ಸದ್ಯಕ್ಕೆ ಕರ್ನಾಟಕದಲ್ಲಿ ಯಾವುದೇ ಬದಲಾವಣೆಗಳ ಬಗ್ಗೆ ಮಾತುಕತೆ ನಡೆಸದಿರಲು ನಿರ್ಧರಿಸಲಾಗಿದೆ. ರಾಜ್ಯ ನಾಯಕರಿಗೆ ಹೈಕಮಾಂಡ್‌ನಿಂದ ಈ ಬಗ್ಗೆ ಸ್ಪಷ್ಟ ಸೂಚನೆ ರವಾನಿಸಲಾಗಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 16, 2025 01:53 PM