ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ಸಚಿವ ಸಂಪುಟ ವಿಸ್ತರಣೆಯ ಬಳಿಕ ಅಹಿಂದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಮುನಿಸಿಕೊಂಡಿದ್ದಾರೆ. ಚಿವ ಸ್ಥಾನ ಕೈತಪ್ಪಿದ್ದರಿಂದ ಸಿದ್ದರಾಮಯ್ಯ ಆಪ್ತರಾದ ಎಚ್.ಸಿ. ಮಹದೇವಪ್ಪ ತೀವ್ರ ಅಸಮಾಧಾನಗೊಂಡಿದ್ದಾರೆ. ಈ ನಡುವೆ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದು, ಇದರಿಂದ ಕಾಂಗ್ರೆಸ್ ಪಾಳಯದಲ್ಲಿ ಗೊಂದಲಗಳು ಹೆಚ್ಚಾಗಿವೆ.
ಬೆಂಗಳೂರು, ಆಗಸ್ಟ್ 06: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಸಿಗದ ಕಾರಣ ಅಹಿಂದ ಶಾಸಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಮುನಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಅಹಿಂದ ಶಾಸಕರಿಗಾಗಿ ಪ್ರಬಲವಾಗಿ ವಾದ ಮಂಡಿಸಿಲ್ಲ. ಕೇವಲ ಕೆಲವರ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಿದ್ದಾರೆ ಎಂಬ ಮಾಹಿತಿ ಆಪ್ತರಿಗೆ ತಲುಪಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ವಿರುದ್ಧ ಅಹಿಂದ ಶಾಸಕರು ಮುನಿಸಿಕೊಂಡಿದ್ದಾರೆ. ಈ ನಡುವೆ ಮಹದೇವಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದು,ಇದರಿಂದ ಕಾಂಗ್ರೆಸ್ ಪಾಳಯದಲ್ಲಿ ಗೊಂದಲಗಳು ಹೆಚ್ಚಾಗಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
