1 ಎಕರೆಗೆ ಗರಿಷ್ಠ 15 ನಿವೇಶನಗಳ ಪರಿಹಾರ: ನೈಸ್ ರಸ್ತೆ ವಿಚಾರದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿಯಿಂದ ಮಹತ್ವದ ತೀರ್ಮಾನ
ನೈಸ್ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ 25 ವರ್ಷಗಳ ಬಳಿಕ ಪರಿಹಾರ ಸಿಗುವ ಸಾಧ್ಯತೆ ಇದೆ. ಸಂಪುಟ ಉಪಸಮಿತಿಯು ಡಿಸಿಎಂ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಸಿ, ಪ್ರತಿ ಎಕರೆಗೆ ಗರಿಷ್ಠ 15 ನಿವೇಶನಗಳನ್ನು ಪರಿಹಾರ ರೂಪದಲ್ಲಿ ನೀಡಲು ತೀರ್ಮಾನಿಸಿದೆ. ಈ ನಿರ್ಧಾರ ಅಂತಿಮ ಅನುಮೋದನೆಗಾಗಿ ಸಚಿವ ಸಂಪುಟಕ್ಕೆ ಮಂಡನೆಯಾಗಲಿದೆ.
ಬೆಂಗಳೂರು, ಸೆಪ್ಟೆಂಬರ್ 03: ನೈಸ್ ರಸ್ತೆ ವಿಚಾರದಲ್ಲಿ ಪರಿಹಾರ ಸಿಗದ ರೈತರಿಗೆ 1 ಎಕರೆಗೆ ಗರಿಷ್ಠ 15 ನಿವೇಶನಗಳ ಪರಿಹಾರ ನೀಡಲು ಡಿಸಿಎಂ ಡಾ.ಪರಮೇಶ್ವರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಪರಿಹಾರ ರೂಪದಲ್ಲಿ ನಿವೇಶನಗಳ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಕ್ಯಾಬಿನೆಟ್ ಸಬ್ ಕಮಿಟಿ ಈ ತೀರ್ಮಾನವನ್ನು ಸಂಪುಟ ಸಭೆಯ ಮುಂದೆ ಮಂಡಿಸಲಿದೆ. ನೈಸ್ ರಸ್ತೆ ಸಂಬಂಧ 25 ವರ್ಷದಿಂದ ಪರಿಹಾರ ನೀಡದ ಹಿನ್ನೆಲೆ ಹೈಕೋರ್ಟ್ ಗರಂ ಆಗಿತ್ತು. ರೈತರಿಗೆ ಪರಿಹಾರ ನೀಡದ ಕ್ರಮ ಅಮಾನವೀಯ ಎಂದಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

