AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಎಕರೆಗೆ ಗರಿಷ್ಠ 15 ನಿವೇಶನಗಳ ಪರಿಹಾರ: ನೈಸ್ ರಸ್ತೆ ವಿಚಾರದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿಯಿಂದ ಮಹತ್ವದ ತೀರ್ಮಾ‌ನ

1 ಎಕರೆಗೆ ಗರಿಷ್ಠ 15 ನಿವೇಶನಗಳ ಪರಿಹಾರ: ನೈಸ್ ರಸ್ತೆ ವಿಚಾರದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿಯಿಂದ ಮಹತ್ವದ ತೀರ್ಮಾ‌ನ

ಪ್ರಸನ್ನ ಗಾಂವ್ಕರ್​
| Edited By: |

Updated on: Sep 03, 2026 | 1:39 PM

Share

ನೈಸ್ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ 25 ವರ್ಷಗಳ ಬಳಿಕ ಪರಿಹಾರ ಸಿಗುವ ಸಾಧ್ಯತೆ ಇದೆ. ಸಂಪುಟ ಉಪಸಮಿತಿಯು ಡಿಸಿಎಂ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಸಿ, ಪ್ರತಿ ಎಕರೆಗೆ ಗರಿಷ್ಠ 15 ನಿವೇಶನಗಳನ್ನು ಪರಿಹಾರ ರೂಪದಲ್ಲಿ ನೀಡಲು ತೀರ್ಮಾನಿಸಿದೆ. ಈ ನಿರ್ಧಾರ ಅಂತಿಮ ಅನುಮೋದನೆಗಾಗಿ ಸಚಿವ ಸಂಪುಟಕ್ಕೆ ಮಂಡನೆಯಾಗಲಿದೆ.

ಬೆಂಗಳೂರು, ಸೆಪ್ಟೆಂಬರ್​​ 03: ನೈಸ್ ರಸ್ತೆ ವಿಚಾರದಲ್ಲಿ ಪರಿಹಾರ ಸಿಗದ ರೈತರಿಗೆ 1 ಎಕರೆಗೆ ಗರಿಷ್ಠ 15 ನಿವೇಶನಗಳ ಪರಿಹಾರ ನೀಡಲು ಡಿಸಿಎಂ ಡಾ.ಪರಮೇಶ್ವರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಪರಿಹಾರ ರೂಪದಲ್ಲಿ ನಿವೇಶನಗಳ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಕ್ಯಾಬಿನೆಟ್ ಸಬ್ ಕಮಿಟಿ ಈ ತೀರ್ಮಾನವನ್ನು ಸಂಪುಟ ಸಭೆಯ ಮುಂದೆ ಮಂಡಿಸಲಿದೆ. ನೈಸ್ ರಸ್ತೆ ಸಂಬಂಧ 25 ವರ್ಷದಿಂದ ಪರಿಹಾರ ನೀಡದ ಹಿನ್ನೆಲೆ ಹೈಕೋರ್ಟ್ ಗರಂ ಆಗಿತ್ತು. ರೈತರಿಗೆ ಪರಿಹಾರ ನೀಡದ ಕ್ರಮ ಅಮಾನವೀಯ ಎಂದಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us