AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ: ಒಬಿಸಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುತ್ತೇವೆಂದ ಡಿಕೆ ಶಿವಕುಮಾರ್

ಜಾತಿ ಗಣತಿ: ಒಬಿಸಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುತ್ತೇವೆಂದ ಡಿಕೆ ಶಿವಕುಮಾರ್

ಗಣಪತಿ ಶರ್ಮಾ
|

Updated on:Sep 15, 2025 | 9:48 AM

Share

Karnataka Caste Census: ಕರ್ನಾಟಕದ ಹೊಸ ಜಾತಿ ಗಣತಿಯ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ‘ಟಿವಿ9’ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಒಬಿಸಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವ ಬಗ್ಗೆ ಅವರು ಭರವಸೆ ನೀಡಿದ್ದಾರೆ. ಎಸ್ಸಿ ಸಮುದಾಯದ ಒಂದು ದೀರ್ಘಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಎಂದೂ ಅವರು ಹೇಳಿದ್ದಾರೆ. ಜಾತಿ ಗಣತಿಯಲ್ಲಿ ಸರಿಯಾದ ಮಾಹಿತಿ ನೀಡುವಂತೆ ಜನರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 15: ಕರ್ನಾಟಕದಲ್ಲಿ ನಡೆಯಲಿರುವ ಹೊಸ ಜಾತಿ ಗಣತಿಯ ಬಗ್ಗೆ ಮತ್ತು ಒಬಿಸಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ‘ಟಿವಿ9’ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಸಂದರ್ಶನದಲ್ಲಿ, ಅವರು ಕಳೆದ 30 ವರ್ಷಗಳಿಂದ ಎಸ್ಸಿ ಸಮುದಾಯ ಎದುರಿಸುತ್ತಿರುವ ಒಂದು ಪ್ರಮುಖ ಸಮಸ್ಯೆಯನ್ನು ತಮ್ಮ ಸರ್ಕಾರ ಪರಿಹರಿಸಿದೆ ಎಂದು ಹೇಳಿದ್ದಾರೆ. ಇದನ್ನು ಬಿಜೆಪಿ ಸರ್ಕಾರ ಮಾಡಲು ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಪೂರ್ಣ ಸಂದರ್ಶನ ಇಂದು ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 15, 2025 09:41 AM
Follow Us