‘ನಂಬಿಕೆಗಿಂತ ದೊಡ್ಡ ಗುಣವಿಲ್ಲ’, ಸಿಎಂ ಮುಂದೆಯೇ ನಂಬಿಕೆ ಮಾತಾಡಿದ ಡಿಕೆಶಿ

Updated on: Nov 28, 2025 | 4:11 PM

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ಇದೀಗ ಬೀದಿಗೆ ಬಂದಿದೆ. ಇದುವರೆಗೆ ಇಬ್ಬರ ಬೆಂಬಲಿಗರ ನಡುವೆ ಅಧಿಕಾರ ಹಂಚಿಕೆ ಮಾತಿನ ಸಮರ ನಡೆಯುತ್ತಿತ್ತು. ಆದ್ರೆ, ಇದೀಗ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒಂದು ಹೆಜ್ಜೆ ಮುಂದೆ ಹೋಗಿ ತಾವೇ ಬಹಿರಂಗವಾಗಿ ಟ್ವೀಟ್ ವಾರ್​​ಗಿಳಿದಿದ್ದಾರೆ. ಕೊಟ್ಟ ಮಾತಿನ ಶಕ್ತಿಯೇ ಜಗತ್ತಿನ ಶಕ್ತಿ ಎಂಬ ಡಿಕೆಶಿ ಪೋಸ್ಟ್​​ಗೆ ಸಿದ್ದರಾಮಯ್ಯ ನೇರಾ ನೇರ ಕೌಂಟರ್​ ಕೊಟ್ಟಿದ್ದು, ಕರ್ನಾಟಕದ ಜನತೆಗೆ ನಾವು ಕೊಟ್ಟ ಮಾತು ಕೇವಲ ಘೋಷಣೆ ಅಲ್ಲ, ನಾವು ಜನತೆಗೆ ಕೊಟ್ಟ ಮಾತೇ ನಮಗೆ ಜಗತ್ತು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು, (ನವೆಂಬರ್ 28): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ಇದೀಗ ಬೀದಿಗೆ ಬಂದಿದೆ. ಇದುವರೆಗೆ ಇಬ್ಬರ ಬೆಂಬಲಿಗರ ನಡುವೆ ಅಧಿಕಾರ ಹಂಚಿಕೆ ಮಾತಿನ ಸಮರ ನಡೆಯುತ್ತಿತ್ತು. ಆದ್ರೆ, ಇದೀಗ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒಂದು ಹೆಜ್ಜೆ ಮುಂದೆ ಹೋಗಿ ತಾವೇ ಬಹಿರಂಗವಾಗಿ ಟ್ವೀಟ್ ವಾರ್​​ಗಿಳಿದಿದ್ದಾರೆ. ಕೊಟ್ಟ ಮಾತಿನ ಶಕ್ತಿಯೇ ಜಗತ್ತಿನ ಶಕ್ತಿ ಎಂಬ ಡಿಕೆಶಿ ಪೋಸ್ಟ್​​ಗೆ ಸಿದ್ದರಾಮಯ್ಯ ನೇರಾ ನೇರ ಕೌಂಟರ್​ ಕೊಟ್ಟಿದ್ದು, ಕರ್ನಾಟಕದ ಜನತೆಗೆ ನಾವು ಕೊಟ್ಟ ಮಾತು ಕೇವಲ ಘೋಷಣೆ ಅಲ್ಲ, ನಾವು ಜನತೆಗೆ ಕೊಟ್ಟ ಮಾತೇ ನಮಗೆ ಜಗತ್ತು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಉಪಸ್ಥಿತರಿದ್ದ ವೇದಿಕೆಯಲ್ಲಿ ಸರ್ವಜ್ಞನ ವಚನ ಹೇಳಿ ನಂಬಿಕೆ ಬಗ್ಗೆ ವಿವರಿಸಿದ್ದಾರೆ. ನಿಂಬೆಗಿನ್ ಹುಳಿಯಿಲ್ಲ, ತುಂಬಿಗಿಂಬ್ ಕರಿಯಿಲ್ಲ. ಶಂಭುಗಿಂಬ್ ದೇವರಿಲ್ಲ, ನಂಬಿಕೆಗಿಂತ ದೊಡ್ಡ ಗುಣವಿಲ್ಲವೆಂದ, ನಿಂಬೆಗಿಂತ ಹುಳಿಯಾದ ವಸ್ತು ಮತ್ತೊಂದಿಲ್ಲ. ದುಂಬಿಗಿಂತ ಕರಿಯಿಲ್ಲ, ಶಂಭು ಅಂದರೆ ಪರಮೇಶ್ವರ ನಂಬಿಕೆಗಿಂತಲೂ ದೊಡ್ಡಗುಣವಿಲ್ಲವೆಂದು ಎಂದು ಭಾಷಣ ಆರಂಭಿಸಿದರು.

Published on: Nov 28, 2025 03:52 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More