AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ

ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ

ಸುಷ್ಮಾ ಚಕ್ರೆ
|

Updated on: Jul 21, 2026 | 7:01 PM

Share

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕೇರಳದ ಸಿಎಂ ವಿ.ಡಿ. ಸತೀಶನ್ ಸೇರಿದಂತೆ ಪಕ್ಷದ ಪ್ರಮುಖ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ನಾಯಕರು ಆಗಮಿಸಿ ಧರಣಿಯಲ್ಲಿ ಕುಳಿತಿದ್ದಾರೆ.

ನವದೆಹಲಿ, ಜುಲೈ 21: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak)  ಹಗರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸದ ಮುಂಭಾಗ ನಡೆಯುತ್ತಿರುವ ಕಾಂಗ್ರೆಸ್‌ನ ಬೃಹತ್ ಧರಣಿ ಸತ್ಯಾಗ್ರಹದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), ಕೇರಳದ ಮುಖ್ಯಮಂತ್ರಿ ಸತೀಶನ್ ಸೇರಿದಂತೆ ಹಲವು ಹಿರಿಯ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕೇರಳದ ಸಿಎಂ ವಿ.ಡಿ. ಸತೀಶನ್ ಸೇರಿದಂತೆ ಪಕ್ಷದ ಪ್ರಮುಖ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ನಾಯಕರು ಆಗಮಿಸಿ ಧರಣಿಯಲ್ಲಿ ಕುಳಿತಿದ್ದಾರೆ.

ದೇಶಾದ್ಯಂತ ಲಕ್ಷಾಂತರ ಯುವಕರ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ನೀಟ್ (NEET) ಸೇರಿದಂತೆ ಪ್ರಮುಖ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಸಂಪೂರ್ಣ ಹೊಣೆಯನ್ನು ಕೇಂದ್ರ ಸರ್ಕಾರ ಹೊರಬೇಕು. ತಕ್ಷಣವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾನಿರತ ನಾಯಕರು ಕಟ್ಟುನಿಟ್ಟಾಗಿ ಆಗ್ರಹಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us