40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

Edited By:

Updated on: Sep 09, 2026 | 12:38 PM

ಸಿಎಂ ಡಿಕೆ ಶಿವಕುಮಾರ್ ಅವರು ಇಡಿ ದಾಳಿಗಳ ಕುರಿತು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಮತ್ತು ಪಕ್ಷವನ್ನು ಬಿಜೆಪಿ ರಾಜಕೀಯವಾಗಿ ಟಾರ್ಗೆಟ್ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ತಮ್ಮ 40 ಶಾಸಕರು, ಸಚಿವರನ್ನು ಗುರಿಯಾಗಿಸಿ ದಾಳಿ ನಡೆಯಬಹುದು ಎಂದು ಡಿಕೆಶಿ ಎಚ್ಚರಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 9: ಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ದಾಳಿ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಹಾಗೂ ಪಕ್ಷವನ್ನು ರಾಜಕೀಯವಾಗಿ ಗುರಿಯಾಗಿಸಲು ಇ.ಡಿ ಅಸ್ತ್ರವನ್ನು ಬಳಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮ್ಮೆಲ್ಲಾ ಸಚಿವರಿಗೆ ಎಚ್ಚರಿಕೆಯ ಮಾತುಹೇಳಿರುವ ಡಿಕೆ ಶಿವಕುಮಾರ್, ಇ.ಡಿ ಯಾರನ್ನೂ ಬಿಡುವುದಿಲ್ಲ, ಸುಳ್ಳು ಕಥೆ ಕಟ್ಟಿ, ಸುಳ್ಳು ಆರೋಪಗಳನ್ನು ಮಾಡಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸುಮಾರು 40 ಮಂದಿ ಕಾಂಗ್ರೆಸ್ ಶಾಸಕರು ಮತ್ತು ಸಚಿವರನ್ನು ಇ.ಡಿ ಗುರಿಯಾಗಿಸಬಹುದು. ನಮ್ಮ ಎಚ್ಚರಿಕೆಯಲ್ಲಿ ನಾವಿರಬೇಕು ಎಂದು ಡಿಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಬಿಜೆಪಿ ನಾಯಕರ ವಿರುದ್ಧದ ಹಳೆಯ ಎಫ್‌ಐಆರ್‌ಗಳು, ವಿಶೇಷವಾಗಿ ಭೋವಿ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇ.ಡಿ ಏಕೆ ಇನ್ನೂ ತನಿಖೆ ನಡೆಸಿಲ್ಲ ಎಂದು ಅವರು ಪ್ರಶ್ನಿಸಿದರು. ಇದು ಬಿಜೆಪಿಯ ರಾಜಕೀಯ ಪ್ರೇರಿತ ತಂತ್ರ ಎಂದು ಅವರು ಪುನರುಚ್ಚರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us