ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ

Edited By:

Updated on: Sep 16, 2024 | 10:09 PM

ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ನನ್ನನ್ನು ಮುಗಿಸಲು ಷಡ್ಯಂತ್ರಗಳು ನಡೆಯುತ್ತಿವೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಾಗಿರಬೇಕು. ಬಸವಣ್ಣ, ಸಂಗೊಳ್ಳಿ ರಾಯಣ್ಣನನ್ನೇ ಈ ಹಿತಶತ್ರಗಳು ಬಿಡಲಿಲ್ಲ. ಮೊದಲು ಗ್ಯಾರಂಟಿ ನಿಲ್ಲಿಸುತ್ತಾರೆಂದು ಪುಕಾರು ಹಬ್ಬಿಸಿದ್ದರು. ಅದು ಆಗದಿದ್ದಾಗ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪ ಹೊರಿಸಿದರು. ನಾನು ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನನ್ನು ಅಧಿಕಾರದಿಂದ ತೆಗೆಯಬೇಕೆಂದು ಹುನ್ನಾರ ನಡೆಸುತ್ತಿದ್ದಾರೆ. ಅದಕ್ಕೆ ನೀವು ಅವಕಾಶ ಮಾಡಿಕೊಡಬೇಡಿ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ನಂತರ ನನ್ನನ್ನು ಮುಗಿಸಲು ಪ್ರಯತ್ನಗಳು ನಡೆಯುತ್ತಿವೆ. ನನ್ನನ್ನು ಮುಗಿಸಲು ನೀವು ಬಿಡ್ತೀರಾ? ಎಂದು ಜನರಿಗೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 16, 2024 10:07 PM
Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More