CM Siddaramaiah PC Live Streaming: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿಂದು 2024-25ನೇ ಸಾಲಿನ ಬಜೆಟ್ ಮಂಡನೆ ಬಜೆಟ್ ಮಂಡನೆ ಮಾಡಿದರು. ಲೋಕಸಭೆ ಚುನಾವಣೆ 2024 ಮುಗಿದ ಬಳಿಕ ನರೇಂದ್ರ ಮೋದಿ ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, ಕೆಲ ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಲಾಗಿದೆ. ಇನ್ನು ಇತ್ತ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿದ್ದು, ಮೋದಿ ಸರ್ಕಾರದ ಬಜೆಟ್ ಬಗ್ಗೆ ಏನೆಲ್ಲಾ ಹೇಳಲಿದ್ದಾರೆ ಎನ್ನುವುದನ್ನು ಲೈವ್ನಲ್ಲಿ ನೋಡಿ.
ಬೆಂಗಳೂರು, (ಜುಲೈ 23): ಅತ್ತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿಂದು 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಆದ್ರೆ, ಈ ಬಜೆಟ್ನಲ್ಲಿ ಮೋದಿ ಸರ್ಕಾರ ಕರ್ನಾಟಕಕ್ಕೆ ಯಾವದೇ ರೀತಿ ಕೊಡುಗೆ ನೀಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಆಂಧ್ರ ಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಪ್ರತ್ಯೇಕ ಪ್ಯಾಕೇಜ್ ಜೊತೆ ಬಂಪರ್ ಕೊಡಗುಗೆಗಳ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಕೂಟದ ನಾಯಕರು ಅಸಮಾಧಾನ ಹೊರಕಿದ್ದಾರೆ. ಇನ್ನು ಈ ಕೇಂದ್ರ ಬಜೆಟ್ ಸಂಬಂಧ ಇತ್ತ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿದ್ದು, ಯಾವೆಲ್ಲಾ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ ಎನ್ನುವುದನ್ನು ನೇರಪ್ರಸಾರದಲ್ಲಿ ವೀಕ್ಷಿಸಿ.
Published On - 4:08 pm, Tue, 23 July 24