ಮಿನಿ ಕುರುಕ್ಷೇತ್ರ: ಸುರ್ಜೇವಾಲ ಜೊತೆಗಿನ ಹೈವೋಲ್ಟೇಜ್ ಸಭೆ ಬಳಿಕ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂಬರುವ ಉಪಚುನಾವಣೆಗಳ ಅಭ್ಯರ್ಥಿ ಆಯ್ಕೆ ಕುರಿತು ಪಕ್ಷದಲ್ಲಿ ಒಮ್ಮತ ಮೂಡಿದೆ ಎಂದು ಹೇಳಿದ್ದಾರೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ಕಳುಹಿಸಲಾಗುವುದು. ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಎಲ್ಲ ನಾಯಕರು ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು, ಮಾರ್ಚ್ 20: ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು, ಈಗಾಗಲೇ ಅಖಾಡ ರಂಗೇರಿದೆ. ಟಿಕೆಟ್ ಘೋಷಣೆಗೂ ಮುನ್ನವೇ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿರೋದು ಕಾಂಗ್ರೆಸ್ಗೆ ತಲೆನೋವಾಗಿದೆ. ಬಿಕ್ಕಟ್ಟು ಬಗೆಹರಿಸಲು ರಾಜ್ಯ ಉಸ್ತುವಾರಿ ಸಚಿವ ರಣದೀಪ್ ಸಿಂಗ್ ಸುರ್ಜೇವಾಲ ಅಖಾಡಕ್ಕಿಳಿದಿದ್ದು, ಸಿಎಂ, ಡಿಸಿಎಂ ಜೊತೆ ಸಭೆ ಮಾಡಿದ್ದಾರೆ. ಸದ್ಯ ಸಭೆ ಬಳಿಕ ಮಾಧ್ಯಮದವರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ನಾನು, ಸಿಎಂ, ರಾಜ್ಯ ಉಸ್ತುವಾರಿ ಸಭೆ ಮಾಡಿದ್ದೇವೆ. ಸಭೆಯಲ್ಲಿ ಎಲ್ಲ ಮುಖಂಡರ ಅಭಿಪ್ರಾಯ ಹೇಳಿದ್ದೇವೆ. ಒಮ್ಮತದ ನಿರ್ಧಾರ ಆಗಿದೆ. ನಮ್ಮ ಅಭಿಪ್ರಾಯವನ್ನು ಹೈಕಮಾಂಡ್ಗೆ ಕಳಿಸುತ್ತೇವೆ. S.S.ಮಲ್ಲಿಕಾರ್ಜುನ್ ಜೊತೆಗೆ ಕೂಡ ಮಾತನಾಡಿದೆ. ಒಳ್ಳೇ ದಿನ ಅನ್ನೋ ಕಾರಣಕ್ಕೆ ನಾಮಪತ್ರ ಸಲ್ಲಿಸಿದ್ದಾನೆ ಎಂದಿದ್ದಾರೆ. ಅಗತ್ಯಬಿದ್ರೆ ಹಿಂಪಡೆಯುತ್ತೇನೆ ಅಂತಾನೂ ಹೇಳಿದ್ದಾರೆ. ಅಲ್ಪಸಂಖ್ಯಾತರು ಪಕ್ಷ ಹೇಳಿದ್ದು ಮಾಡುತ್ತೇವೆ ಅಂದಿದ್ದಾರೆ. ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಅಂತ ಎಲ್ಲಾ ಹೇಳಿದ್ದಾರೆ. ಶೀಘ್ರವೇ ಅಭ್ಯರ್ಥಿ ಆಯ್ಕೆ ಮಾಡಿ ಘೋಷಿಸುತ್ತೇವೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
