ಮೈಸೂರು, ಅಕ್ಟೋಬರ್ 9: ಸಚಿವ ಮಹದೇವಪ್ಪ ನಿವಾಸದಲ್ಲಿ ಕಾಂಗ್ರೆಸ್ ದಲಿತ ನಾಯಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಮೈಸೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಮಹದೇವಪ್ಪ ಮನೆಯಲ್ಲಿ ಡಿನ್ನರ್ ಅರೇಂಜ್ ಅಗಿತ್ತು. ಊಟಕ್ಕೆ ಹೋಗಿದ್ದೆವು ಅಷ್ಟೆ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತದೆಯೇ? ಡಿನ್ನರ್ಗೆ ಬೇರೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ನಾನು, ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಶಾಸಕ ಎ.ಆರ್.ಕೃಷ್ಣಮೂರ್ತಿ ರಾತ್ರಿ ಡಿನ್ನರ್ ಮಾಡಿದ್ದೆವು. ಈ ವೇಳೆ ಯಾವುದೇ ರಾಜಕೀಯ ವಿಚಾರಗಳು ಚರ್ಚೆ ನಡೆದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:50 am, Wed, 9 October 24