ಸತೀಶ್ ಜಾರಕಿಹೊಳಿ, ಮಹದೇವಪ್ಪ ಜೊತೆಗಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ

| Updated By: ಗಣಪತಿ ಶರ್ಮ

Updated on: Oct 09, 2024 | 9:45 AM

ಮುಡಾ ಹಗರಣ, ಸಿಎಂ ಬದಲಾವಣೆ ಚರ್ಚೆ, ದಲಿತ ಸಿಎಂ ಕೂಗು ಈ ಎಲ್ಲ ಬೆಳವಣಿಗೆಗಳ ಮಧ್ಯೆ ಮಂಗಳವಾರ ರಾತ್ರಿ ಮೈಸೂರಿನಲ್ಲಿ ಸಚಿವ ಮಹದೇವಪ್ಪ ನಿವಾಸದಲ್ಲಿ ಗೃಹ ಸಚಿವ ಜಿ ಪರಮೇಶ್ವರ, ಸತೀಶ್ ಜಾರಕಿಹೊಳಿ ಡಿನ್ನರ್ ಮಾಡಿದ್ದಾರೆ. ಡಿನ್ನರ್ ಮೀಟಿಂಗ್ ರಹಸ್ಯವೇನು ಎಂಬುದನ್ನು ಪರಮೇಶ್ವರ್ ಅವರು ಮಾತನಾಡಿದ್ದಾರೆ, ಇಲ್ಲಿದೆ ನೋಡಿ.

ಮೈಸೂರು, ಅಕ್ಟೋಬರ್ 9: ಸಚಿವ ಮಹದೇವಪ್ಪ ನಿವಾಸದಲ್ಲಿ ಕಾಂಗ್ರೆಸ್​​ ದಲಿತ ನಾಯಕರ ಡಿನ್ನರ್​ ಮೀಟಿಂಗ್​ ವಿಚಾರವಾಗಿ ಮೈಸೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಮಹದೇವಪ್ಪ ಮನೆಯಲ್ಲಿ ಡಿನ್ನರ್ ಅರೇಂಜ್​ ಅಗಿತ್ತು. ಊಟಕ್ಕೆ ಹೋಗಿದ್ದೆವು ಅಷ್ಟೆ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತದೆಯೇ? ಡಿನ್ನರ್​ಗೆ ಬೇರೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ನಾನು, ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಶಾಸಕ ಎ.ಆರ್.ಕೃಷ್ಣಮೂರ್ತಿ ರಾತ್ರಿ ಡಿನ್ನರ್ ಮಾಡಿದ್ದೆವು. ಈ ವೇಳೆ ಯಾವುದೇ ರಾಜಕೀಯ ವಿಚಾರಗಳು ಚರ್ಚೆ ನಡೆದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:50 am, Wed, 9 October 24

Follow us on