ಲೋಕಸಭಾ ಚುನಾವಣೆಗೆ ಭರ್ಜರಿ ಆಪರೇಷನ್: ಶೆಟ್ಟರ್-ಸವದಿ ನೇತೃತ್ವದಲ್ಲಿ ಬಿಜೆಪಿ ಲಿಂಗಾಯತ ನಾಯಕರಿಗೆ ಗಾಳ

Edited By:

Updated on: Aug 20, 2023 | 1:52 PM

ಲೋಕಸಭೆ ಚುನಾವಣೆಗೆ ವೋಟ್​ ಶೇರ್ ಹೆಚ್ಚಳಕ್ಕೆ ಕಾಂಗ್ರೆಸ್​ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದು, ಇದಕ್ಕಾಗಿಯೇ ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಗಳ ಕ್ರೋಢೀಕರಣಕ್ಕೆ ತಂತ್ರಗಾರಿಕೆ ನಡೆಸಿದೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಣ್ಮಣ ಸವದಿ ಜೊತೆಗೆ ಆತ್ಮೀಯರಾಗಿರುವ ಮಾಜಿ ಶಾಸಕರನ್ನು ಸಂಪರ್ಕಿಸುತ್ತಿರುವ ಮಾಹಿತಿ ಸಿಕ್ಕಿದೆ.

ಬೆಂಗಳೂರು, (ಆಗಸ್ಟ್ 20): ಲೋಕಸಭೆ ಚುನಾವಣೆಗೆ ವೋಟ್​ ಶೇರ್ ಹೆಚ್ಚಳಕ್ಕೆ ಕಾಂಗ್ರೆಸ್​ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದು, ಇದಕ್ಕಾಗಿಯೇ ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಗಳ ಕ್ರೋಢೀಕರಣಕ್ಕೆ ತಂತ್ರಗಾರಿಕೆ ನಡೆಸಿದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದ ಬಿಜೆಪಿ ನಾಯಕರಿಗೆ ಗಾಳ ಹಾಕಿದೆ. ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕೆಲವು ಬಿಜೆಪಿ ನಾಯಕರನ್ನು ಕಾಂಗ್ರೆಸ್ ಕಡೆ ಸೆಳೆಯುವ ಚರ್ಚೆ ನಡೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

20-25 ಹಿರಿಯ ಬಿಜೆಪಿ ನಾಯಕರು, ಮಾಜಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಕಸರತ್ತು ನಡೆಸಿದೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಣ್ಮಣ ಸವದಿ ಜೊತೆಗೆ ಆತ್ಮೀಯರಾಗಿರುವ ಮಾಜಿ ಶಾಸಕರನ್ನು ಸಂಪರ್ಕಿಸುತ್ತಿರುವ ಮಾಹಿತಿ ಸಿಕ್ಕಿದ್ದು, ಶ‌ಂಕರ್ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವರ ಜೊತೆಗೆ ಈಗಾಗಲೇ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ಅಕಸ್ಮಾತ್ ಕಾಂಗ್ರೆಸ್ ಈ ಪ್ರಯತ್ನ ಫಲ ಕೊಟ್ಟರೆ ಲೋಕಸಭೆ ಚುನಾವಣೆ ವೇಳೆ ಬಿಜೆಪಿಗೆ ಮತ್ತಷ್ಟು ಸಮಸ್ಯೆ ಉಂಟಾಗಬಹುದು.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Aug 20, 2023 01:50 PM