ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕರ್ನಾಟಕ ಕಾಂಗ್ರೆಸ್​ ತಿರಂಗಾ ಯಾತ್ರೆ: ಸಿಎಂ, ಡಿಸಿಎಂ ಭಾಗಿ

Updated on: May 09, 2025 | 2:08 PM

ಪೆಹಲ್ಗಾಮ್‌ನ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್‌ಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಿರಂಗಾ ಯಾತ್ರೆ ಆಯೋಜಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆ.ಆರ್. ಸರ್ಕಲ್‌ನಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ನಡೆದ ಈ ಯಾತ್ರೆಯಲ್ಲಿ ಪಕ್ಷಾತೀತವಾಗಿ ಅನೇಕರು ಭಾಗವಹಿಸಿದ್ದರು.

ಬೆಂಗಳೂರು, ಮೇ 09: ಪೆಹಲ್ಗಾಮ್ ಉಗ್ರರ ದಾಳಿಗೆ ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ (Operation Sindoor) ಮೂಲಕ ಪ್ರತ್ಯುತ್ತರ ನೀಡಲಾಗಿದೆ. ಹಾಗಾಗಿ ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ತಿರಂಗಾ ಯಾತ್ರೆ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಆರ್ ಸರ್ಕಲ್ ನಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಸರ್ಕಲ್​ವರೆಗೆ ತಿರಂಗಾ ಯಾತ್ರೆ ಮಾಡಲಾಗಿದ್ದು, ಪಕ್ಷಾತೀತವಾಗಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮತ್ತು ಸಾರ್ವಜನಿಕರು ಯಾತ್ರೆಯಲ್ಲಿ ಭಾಗಿಯಾಗಿದ್ದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 09, 2025 02:03 PM