ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ: ರಾಷ್ಟ್ರ ರಾಜಧಾನಿಯತ್ತ ಹಾರಿದ ನಾಯಕರ ದಂಡು
ಸಿದ್ದರಾಮಯ್ಯ ರಾಜೀನಾಮೆ ಬಳಿಕ, ಕರ್ನಾಟಕದ ನಾಯಕರು ದೆಹಲಿಗೆ ಎರಡನೇ ಸುತ್ತಿನ ಭೇಟಿ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಹೊಸ ಸಿಎಂ, ಡಿಸಿಎಂ, ಹಾಗೂ ಸಚಿವ ಸಂಪುಟ ರಚನೆ ಬಗ್ಗೆ ಚರ್ಚಿಸಲಿದ್ದಾರೆ. ಎಷ್ಟು ಸಚಿವರು ಪ್ರಮಾಣ ವಚನ ಸ್ವೀಕರಿಸಬೇಕು ಮತ್ತು ಸಾಮಾಜಿಕ ಸಮೀಕರಣ ಹೇಗಿರಬೇಕೆಂಬ ಬಗ್ಗೆ ಈ ವೇಳೆ ಮಾತುಕತೆ ನಡೆಯಲಿದೆ.
ಬೆಂಗಳೂರು, ಮೇ 28: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ನಂತರ, ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಕುರಿತು ಚರ್ಚಿಸಲು ರಾಜ್ಯ ನಾಯಕರು ದೆಹಲಿಗೆ ಎರಡನೇ ಸುತ್ತಿನ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದು, ಅವರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಇಂದು ಸಂಜೆ 7:40ಕ್ಕೆ ದೆಹಲಿಗೆ ಪಯಣ ಬೆಳೆಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಚರ್ಚಿಸಿ ಸಿಎಲ್ಪಿ ಸಭೆ, ಹೊಸ ಸಿಎಂ ಆಯ್ಕೆ, ಡಿಸಿಎಂ ಸ್ಥಾನಗಳ ಹಂಚಿಕೆ ಮತ್ತು ಸಚಿವ ಸಂಪುಟ ರಚನೆ ಕುರಿತು ನಾಯಕರು ಮಾತುಕತೆ ನಡೆಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಎಲ್ಲ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಮುಖ್ಯಮಂತ್ರಿಗಳೊಂದಿಗೆ ಎಷ್ಟು ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಬಗ್ಗೆಯೂ ಚರ್ಚೆಗಳು ನಡೆಯಲಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.


