AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕತ್ವ ವಿಚಾರದಲ್ಲಿ ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ: ಪರಮೇಶ್ವರ್ ಪ್ರಶ್ನೆ, ಅಚ್ಚರಿಯ ಹೇಳಿಕೆ

ನಾಯಕತ್ವ ವಿಚಾರದಲ್ಲಿ ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ: ಪರಮೇಶ್ವರ್ ಪ್ರಶ್ನೆ, ಅಚ್ಚರಿಯ ಹೇಳಿಕೆ

Ganapathi Sharma
|

Updated on:Oct 23, 2025 | 12:55 PM

Share

ಸತೀಶ್ ಜಾರಕಿಹೊಳಿ ಅವರನ್ನು ಸಿದ್ಧರಾಮಯ್ಯ ಉತ್ತರಾಧಿಕಾರಿ ಎಂದು ಯತೀಂದ್ರ ಬಿಂಬಿಸಿರುವ ಕುರಿತು ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಜಾರಕಿಹೊಳಿಯವರ ಹೇಳಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಅಹಿಂದ ನಾಯಕತ್ವದ ಸೈದ್ಧಾಂತಿಕ ಬದ್ಧತೆಯನ್ನು ಸೂಚಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂ ಆಯ್ಕೆ ಪ್ರಕ್ರಿಯೆಯು ಹೈಕಮಾಂಡ್ ನಿರ್ಧಾರದ ಮೇಲಿರುತ್ತದೆ ಎಂದಿದ್ದಾರೆ.

ಬೆಂಗಳೂರು, ಅಕ್ಟೋಬರ್ 23: ಸಿಎಂ ಸಿದ್ಧರಾಮಯ್ಯ ನಂತರ ಸತೀಶ್ ಜಾರಕಿಹೊಳಿ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂಬ ಎಂಎಲ್​​ಸಿ ಯತೀಂದ್ರ ಹೇಳಿಕೆ ಕುರಿತು ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಸತೀಶ್ ಜಾರಕಿಹೊಳಿ ಹೇಳಿಕೆ ಅಹಿಂದ ವರ್ಗದ ಸೈದ್ಧಾಂತಿಕ ನಾಯಕತ್ವದ ಬಗ್ಗೆಯೇ ಹೊರತು ಸಿಎಂ ಸ್ಥಾನದ ಬಗ್ಗೆ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜಾರಕಿಹೊಳಿ ಅಹಿಂದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಿಎಂ ಅಧಿಕಾರದ ಅವಧಿ ಪೂರ್ಣವಾಗಿದ್ದು, ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯು ಹೈಕಮಾಂಡ್ ಮತ್ತು ಸಿಎಲ್‌ಪಿ ಸಭೆಯ ಮೂಲಕ ನಡೆಯುತ್ತದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Oct 23, 2025 12:52 PM