ಅಧಿಕಾರ ಹಂಚಿಕೆ, ಕ್ರಾಂತಿ ಬಗ್ಗೆ ರಾಜಣ್ಣ ಸ್ಫೋಟಕ ಹೇಳಿಕೆ: ಹೇಳಿದ್ದೇನು ನೋಡಿ
ಕೆ.ಎನ್. ರಾಜಣ್ಣ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ವಿಷಯ ಮತ್ತು ಬ್ರೇಕ್ಫಾಸ್ಟ್ ಮೀಟಿಂಗ್ ಬಗ್ಗೆ ವಿಡಂಬನಾತ್ಮಕವಾಗಿ ವಿವರಿಸಿದ್ದಾರೆ. ಯಾವುದೇ ಬದಲಾವಣೆಗಳು ನಡೆಯುವ ಸಾಧ್ಯತೆ ಇಲ್ಲ ಎಂದು ಹೇಳಿರುವ ಅವರು, ಸಚಿವ ಸಂಪುಟ ವಿಸ್ತರಣೆಯು ಬೆಳಗಾವಿ ಅಧಿವೇಶನದ ನಂತರ ಆಗಲಿದೆ ಎಂದು ತಿಳಿಸಿದ್ದಾರೆ.
ತುಮಕೂರು, ಡಿಸೆಂಬರ್ 3: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಚರ್ಚೆ ಹಾಗೂ ‘ಬ್ರೇಕ್ಫಾಸ್ಟ್ ಮೀಟಿಂಗ್’ಗಳ ಬಗ್ಗೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೊದಲು ಹೆಣ್ಣು ನೋಡಲು ಹೋಗುತ್ತಾರೆ, ನಂತರ ಮನೆ ನೋಡಲು ಹೋಗುತ್ತಾರೆ. ಅದೇ ರೀತಿ ಈ ಬ್ರೇಕ್ಫಾಸ್ಟ್ ಮೀಟಿಂಗ್ ಎಂದು ಅವರು ತುಮಕೂರಿನಲ್ಲಿ ವ್ಯಂಗ್ಯವಾಡಿದ್ದಾರೆ. ಅಲ್ಲದೆ, ಪದ್ಧತಿಗೆ ಹೋಲಿಸಿದ್ದಾರೆ. ಅಲ್ಲದೆ, ಏನಿದೆಯೋ ಅದೇ ಮುಂದುವರಿದುಕೊಂಡು ಹೋಗುತ್ತದೆ ಎಂದಿದ್ದಾರೆ.
