AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಕುರ್ಚಿ ಗುದ್ದಾಟದ ನಡುವೆ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾದ ಡಿಸಿಎಂ ಡಿಕೆ ಶಿವಕುಮಾರ್

ಕರ್ನಾಟಕದ ಕುರ್ಚಿ ಗುದ್ದಾಟದ ನಡುವೆ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾದ ಡಿಸಿಎಂ ಡಿಕೆ ಶಿವಕುಮಾರ್

ಸುಷ್ಮಾ ಚಕ್ರೆ
|

Updated on: Nov 27, 2025 | 11:15 PM

Share

ಕರ್ನಾಟಕದ ಕಾಂಗ್ರೆಸ್​ನಲ್ಲಿ ನಾಯಕತ್ವಕ್ಕಾಗಿ ಹಗ್ಗಜಗ್ಗಾಟ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಕುರ್ಚಿಯಿಂದ ಕೆಳಗಿಳಿಯುತ್ತಾರಾ? ಎಂಬ ಕುತೂಹಲವನ್ನು ಮೂಡಿಸಿದೆ. ಇಬ್ಬರೂ ನಾಯಕರ ಬೆಂಬಲಿಗರು ಲಾಬಿ ಮಾಡುವ ಮೂಲಕ ತಮ್ಮ ನಾಯಕನೇ ಸಿಎಂ ಆಗಿ ಅಧಿಕಾರ ನಡೆಸಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಶನಿವಾರ ಕರ್ನಾಟಕದ ಅಧಿಕಾರದ ಗುದ್ದಾಟಕ್ಕೆ ಕ್ಲೈಮ್ಯಾಕ್ಸ್ ಸಿಗಲಿದೆ. ಇದೆಲ್ಲದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಮುಂಬೈಗೆ ತೆರಳಿದ್ದಾರೆ. ಆದರೆ, ಈ ಭೇಟಿಯ ಹಿಂದೆಯೂ ರಾಜಕೀಯ ಉದ್ದೇಶವಿರಬಹುದು ಎಂಬ ಅನುಮಾನವೂ ಕಾಡುತ್ತಿದೆ.

ಬೆಂಗಳೂರು, ನವೆಂಬರ್ 27: ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಕಳೆದ ವಾರದಿಂದ ಇಡೀ ದೇಶದ ಗಮನ ಸೆಳೆದಿದೆ. ಕರ್ನಾಟಕದ ಕಾಂಗ್ರೆಸ್​ನಲ್ಲಿ ನಾಯಕತ್ವಕ್ಕಾಗಿ ಹಗ್ಗಜಗ್ಗಾಟ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಕುರ್ಚಿಯಿಂದ ಕೆಳಗಿಳಿಯುತ್ತಾರಾ? ಎಂಬ ಕುತೂಹಲವನ್ನು ಮೂಡಿಸಿದೆ. ಇಬ್ಬರೂ ನಾಯಕರ ಬೆಂಬಲಿಗರು ಲಾಬಿ ಮಾಡುವ ಮೂಲಕ ತಮ್ಮ ನಾಯಕನೇ ಸಿಎಂ ಆಗಿ ಅಧಿಕಾರ ನಡೆಸಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಶನಿವಾರ ಕರ್ನಾಟಕದ ಅಧಿಕಾರದ ಗುದ್ದಾಟಕ್ಕೆ ಕ್ಲೈಮ್ಯಾಕ್ಸ್ ಸಿಗಲಿದೆ. ಇದೆಲ್ಲದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಮುಂಬೈಗೆ ತೆರಳಿದ್ದಾರೆ. ಆದರೆ, ಈ ಭೇಟಿಯ ಹಿಂದೆಯೂ ರಾಜಕೀಯ ಉದ್ದೇಶವಿರಬಹುದು ಎಂಬ ಅನುಮಾನವೂ ಕಾಡುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More