ಕರ್ನಾಟಕದ ಕುರ್ಚಿ ಗುದ್ದಾಟದ ನಡುವೆ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾದ ಡಿಸಿಎಂ ಡಿಕೆ ಶಿವಕುಮಾರ್
ಕರ್ನಾಟಕದ ಕಾಂಗ್ರೆಸ್ನಲ್ಲಿ ನಾಯಕತ್ವಕ್ಕಾಗಿ ಹಗ್ಗಜಗ್ಗಾಟ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಕುರ್ಚಿಯಿಂದ ಕೆಳಗಿಳಿಯುತ್ತಾರಾ? ಎಂಬ ಕುತೂಹಲವನ್ನು ಮೂಡಿಸಿದೆ. ಇಬ್ಬರೂ ನಾಯಕರ ಬೆಂಬಲಿಗರು ಲಾಬಿ ಮಾಡುವ ಮೂಲಕ ತಮ್ಮ ನಾಯಕನೇ ಸಿಎಂ ಆಗಿ ಅಧಿಕಾರ ನಡೆಸಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಶನಿವಾರ ಕರ್ನಾಟಕದ ಅಧಿಕಾರದ ಗುದ್ದಾಟಕ್ಕೆ ಕ್ಲೈಮ್ಯಾಕ್ಸ್ ಸಿಗಲಿದೆ. ಇದೆಲ್ಲದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಮುಂಬೈಗೆ ತೆರಳಿದ್ದಾರೆ. ಆದರೆ, ಈ ಭೇಟಿಯ ಹಿಂದೆಯೂ ರಾಜಕೀಯ ಉದ್ದೇಶವಿರಬಹುದು ಎಂಬ ಅನುಮಾನವೂ ಕಾಡುತ್ತಿದೆ.
ಬೆಂಗಳೂರು, ನವೆಂಬರ್ 27: ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಕಳೆದ ವಾರದಿಂದ ಇಡೀ ದೇಶದ ಗಮನ ಸೆಳೆದಿದೆ. ಕರ್ನಾಟಕದ ಕಾಂಗ್ರೆಸ್ನಲ್ಲಿ ನಾಯಕತ್ವಕ್ಕಾಗಿ ಹಗ್ಗಜಗ್ಗಾಟ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಕುರ್ಚಿಯಿಂದ ಕೆಳಗಿಳಿಯುತ್ತಾರಾ? ಎಂಬ ಕುತೂಹಲವನ್ನು ಮೂಡಿಸಿದೆ. ಇಬ್ಬರೂ ನಾಯಕರ ಬೆಂಬಲಿಗರು ಲಾಬಿ ಮಾಡುವ ಮೂಲಕ ತಮ್ಮ ನಾಯಕನೇ ಸಿಎಂ ಆಗಿ ಅಧಿಕಾರ ನಡೆಸಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಶನಿವಾರ ಕರ್ನಾಟಕದ ಅಧಿಕಾರದ ಗುದ್ದಾಟಕ್ಕೆ ಕ್ಲೈಮ್ಯಾಕ್ಸ್ ಸಿಗಲಿದೆ. ಇದೆಲ್ಲದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ದಿಢೀರನೆ ಮುಂಬೈನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಮುಂಬೈಗೆ ತೆರಳಿದ್ದಾರೆ. ಆದರೆ, ಈ ಭೇಟಿಯ ಹಿಂದೆಯೂ ರಾಜಕೀಯ ಉದ್ದೇಶವಿರಬಹುದು ಎಂಬ ಅನುಮಾನವೂ ಕಾಡುತ್ತಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

