ದರ್ಶನ್​ ಬ್ಯಾನ್​ ವಿಚಾರ: ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​.ಎಂ. ಸುರೇಶ್​ ಪ್ರತಿಕ್ರಿಯೆ

|

Updated on: Jun 13, 2024 | 9:09 PM

‘ಈ ವಿಚಾರದಲ್ಲಿ ನಾವು ರಾಜಿ ಆಗಲ್ಲ. ನಾವು ಈ ಹಿಂದೆ ಎಷ್ಟೋ ಕೇಸ್​ಗಳಲ್ಲಿ ಸಂಧಾನ ಮಾಡಿಸಿದ್ದೇವೆ. ಆದರೆ ಇದು ಕೊಲೆ ಪ್ರಕರಣ ಆಗಿರುವುದರಿಂದ ಎಲ್ಲವೂ ಕಾನೂನಿನ ಅಡಿಯಲ್ಲೇ ನಡೆಯಬೇಕು. ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತೇವೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​.ಎಂ. ಸುರೇಶ್​ ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ...

ರೇಣುಕಾ ಸ್ವಾಮಿ ಎಂಬ ಅಭಿಮಾನಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿ ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ (Darshan)​ ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದರ್ಶನ್​, ಪವಿತ್ರಾ ಗೌಡ ಹಾಗೂ ಅವರ ಸಹಚರರನ್ನೂ ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಕೊಲೆ ಆರೋಪ ಇರುವುದರಿಂದ ದರ್ಶನ್​ ಅವರನ್ನು ಚಿತ್ರರಂಗದಲ್ಲಿ ಬ್ಯಾನ್​ (Darshan Ban) ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಈ ಕುರಿತು ಮಾಹಿತಿ ನೀಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (Karnataka Film Chamber) ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​ಎಂ ಸುರೇಶ್​ ಮಾತನಾಡಿದರು. ‘ಯಾವ ಚಿತ್ರರಂಗದಲ್ಲೂ ನಟ-ನಟಿಯರನ್ನು ತಕ್ಷಣಕ್ಕೆ ಬ್ಯಾನ್​ ಮಾಡಿಲ್ಲ. ಹಲವು ಸಭೆ ನಡೆದ ಬಳಿಕ ತೀರ್ಮಾನ ತೆಗೆದುಕೊಂಡಿದ್ದರು. ನಮ್ಮಲ್ಲಿ ದರ್ಶನ್​ ಬಂಧನವಾಗಿ ಮೂರು ದಿನ ಆಗಿದೆ ಅಷ್ಟೇ. ನಮಗೂ ಸಮಯಾವಕಾಶ ಬೇಕು. ಈ ವಿಚಾರದಲ್ಲಿ ಸಂಧಾನ ಆಗಲ್ಲ. ದರ್ಶನ್​ ಜೊತೆ ಯಾವ ಸಿನಿಮಾಗಳು ಅನೌನ್ಸ್​ ಆಗಿವೆ ಹಾಗೂ ಯಾವ ಶೂಟಿಂಗ್​ ನಡೆಯುತ್ತಿದೆ ಎಂಬುದನ್ನು ನೋಡಬೇಕು. ಈ ಹಿಂದೆ ನಾವು ಎಷ್ಟೋ ಕೇಸ್​ಗಳಲ್ಲಿ ಸಂಧಾನ ಮಾಡಿಸಿದ್ದೇವೆ. ಆದರೆ ಇದು ಕೊಲೆ ಕೇಸ್​ ಆದ್ದರಿಂದ ಸೂಕ್ಷ ವಿಚಾರ. ಎಲ್ಲವೂ ಕಾನೂನಿನ ಅಡಿಯಲ್ಲೇ ಆಗಬೇಕು. ನಾವು ಪಾರದರ್ಶಕತೆಯಿಂದ ಕೆಲಸ ಮಾಡುತ್ತೇವೆ’ ಎಂದು ಎನ್​ಎಂ ಸುರೇಶ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on