Loading video

ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!

|

Updated on: Mar 24, 2025 | 8:45 PM

ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆ ಕಾಲ ಕೂಡಿಬಂದಂತಿದೆ. ಈ ವರ್ಷದಲ್ಲೇ ಕರ್ನಾಟಕದ ಐದು ಮಹಾ ನಗರ ಪಾಲಿಕೆಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ ಎಸ್ ಸಂಗ್ರೇಶಿ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆ ಮೀಸಲಾತಿಯಂತೆ ಈ ವವರ್ಷವೇ ಚುನಾವಣೆ ಮಾಡುತ್ತೇವೆ ಎಂದರು.

ಮೈಸೂರು, (ಮಾರ್ಚ್ 24): ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆ ಕಾಲ ಕೂಡಿಬಂದಂತಿದೆ. ಈ ವರ್ಷದಲ್ಲೇ ಕರ್ನಾಟಕದ ಐದು ಮಹಾ ನಗರ ಪಾಲಿಕೆಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ ಎಸ್ ಸಂಗ್ರೇಶಿ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆ ಮೀಸಲಾತಿಯಂತೆ ಈ ವವರ್ಷವೇ ಚುನಾವಣೆ ಮಾಡುತ್ತೇವೆ. ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದೇವೆ. ಐದು ಮಹಾ ನಗರ ಪಾಲಿಕೆಯಲ್ಲೂ ಮತದಾರರ ಪಟ್ಟಿ ಸಿದ್ದವಾಗಿದೆ. ಈ ವರ್ಷದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಮಾಡಲು ಚುನಾವಣಾ ಆಯೋಗ ಸಿದ್ಧವಾಗಿದೆ. ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಮಂಗಳೂರು ಐದು ಮಹಾ ನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ನಡೆದಿದೆ ಎಂದರು.