ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: ಡಿಕೆ ಶಿವಕುಮಾರ್

ವಿವೇಕ ಬಿರಾದಾರ

Updated on: Jun 03, 2025 | 10:45 PM

ಜೂನ್ 27ರಂದು ಕೆಂಪೇಗೌಡ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ನಿರ್ಧರಿಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಂಪೇಗೌಡ ಪ್ರಾಧಿಕಾರಕ್ಕೆ 5 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ಘೋಷಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಜಾಗವನ್ನು ವಿನಿಮಯ ಮಾಡಿಕೊಂಡು ಈ ಜಮೀನನ್ನು ಪಡೆಯಲಾಗಿದೆ. ಡಿಸಿಎಂ ಈ ಜಮೀನನ್ನು ವೀಕ್ಷಿಸಿದ್ದು, ಹಲವು ಗಣ್ಯರು ಅವರಿಗೆ ಸಾಥ್ ನೀಡಿದರು.

ಸರ್ಕಾರದ ವತಿಯಿಂದ ಜೂನ್ 27ರಂದು ಕೆಂಪೇಗೌಡ ಜಯಂತಿ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಐದು ಎಕರೆ ಜಮೀನನ್ನು ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರಿಂದ ಮಂಜೂರು ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದರು. ಸಮಾಜ ಕಲ್ಯಾಣ ಇಲಾಖೆ ಜಾಗ ಎಕ್ಸ್‌ಚೇಂಜ್ ಮಾಡಿ ಪಡೆದಿದ್ದೇವೆ ಎಂದು ಹೇಳಿದರು. ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಡಪ್ರಭು ಕೆಂಪೇಗೌಡ ಪ್ರಾಧಿಕಾರದ ಜಮೀನು ವೀಕ್ಷಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ, ಬಿಬಿಎಂಪಿ ಮುಖ್ಯ ಆಯುಕ್ತ ಡಾ ಮಹೇಶ್ವರ ರಾವ್ ಸೇರಿ ಹಲವರು ಸಾಥ್​ ನೀಡಿದರು.

Loading...
Unable to load recommendations.
Follow Us