ಮೈಸೂರಿಗೆ ಕರ್ನಾಟಕ ಅಂತ ನಾಮಕರಣವಾದ 50 ನೇ ವರ್ಷ; ವರ್ಷವಿಡೀ ಉತ್ಸವ ಅಚರಿಸಲು ಸರ್ಕಾರ ತೀರ್ಮಾನ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 03, 2023 | 10:36 AM

ಸುವರ್ಣ ಮಹೋತ್ಸವವನ್ನು ಸಿದ್ದರಾಮಯ್ಯ ನಿನ್ನೆ ಐತಿಹಾಸಿಕ ವಿಜಯನಗರದ ಹಂಪಿಯಲ್ಲಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದ್ದಾರೆ ಎಂದು ಹೇಳಿದ ಶಿವಕುಮಾರ್ ಅದರ ಮುಂದುವರಿದ ಭಾಗವಾಗಿ ಗದಗನಲ್ಲಿ ಒಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಸುವರ್ಣ ಮಹೋತ್ವವದ ನೆನಪಿಗಾಗಿ ತಾಯಿ ಭುವನೇಶ್ವರಿ ಭವನ ನಿರ್ಮಿಸಲು ನಿರ್ಧರಿಸಲಾಗಿದೆ ಮತ್ತು ಅದಕ್ಕಾಗಿ ಜಾಗದ ಶೋಧ ನಡೆದಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಹುಬ್ಬಳ್ಳಿ: ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣ ಆಗಿ 50 ವರ್ಷಗಳು ಕಳೆದಿರುವ ಸಂದರ್ಭದಲ್ಲಿ, ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಕಾಂಗ್ರೆಸ ಸರ್ಕಾರ ಈ ಇಡೀ ವರ್ಷವನ್ನು ಸುವರ್ಣ ಮಹೋತ್ಸವವಾಗಿ (golden jubilee) ಅಚರಿಸಲು ತೀರ್ಮಾನಿಸಿದೆ. ಉತ್ಸವದ ಭಾಗವಾಗಿ ಗದಗನಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಶುಕ್ರವಾರ ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿರುವ ಶಿವಕುಮಾರ್ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಸಂಕ್ಷಿಪ್ತ ವಿವರಣೆ ನೀಡಿದರು. ಸುವರ್ಣ ಮಹೋತ್ಸವವನ್ನು ಸಿದ್ದರಾಮಯ್ಯ ನಿನ್ನೆ ಐತಿಹಾಸಿಕ ವಿಜಯನಗರದ ಹಂಪಿಯಲ್ಲಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದ್ದಾರೆ ಎಂದು ಹೇಳಿದ ಶಿವಕುಮಾರ್ ಅದರ ಮುಂದುವರಿದ ಭಾಗವಾಗಿ ಗದಗನಲ್ಲಿ ಒಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಸುವರ್ಣ ಮಹೋತ್ವವದ ನೆನಪಿಗಾಗಿ ತಾಯಿ ಭುವನೇಶ್ವರಿ ಭವನ ನಿರ್ಮಿಸಲು ನಿರ್ಧರಿಸಲಾಗಿದೆ ಮತ್ತು ಅದಕ್ಕಾಗಿ ಜಾಗದ ಶೋಧ ನಡೆದಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 03, 2023 10:35 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.