AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಸಾಲ ತೀರಿಸದ ರೈತರ ವಿರುದ್ಧ ದೂರು ದಾಖಲಿಸಲು ಮುಂದಾದ ಸರ್ಕಾರ

ಚಾಮರಾಜನಗರ: ಸಾಲ ತೀರಿಸದ ರೈತರ ವಿರುದ್ಧ ದೂರು ದಾಖಲಿಸಲು ಮುಂದಾದ ಸರ್ಕಾರ

ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on: Oct 30, 2024 | 3:38 PM

Share

ಕರ್ನಾಟಕದಲ್ಲಿ ವಕ್ಫ್​ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ವಕ್ಫ್​ಗೆ ಆಸ್ತಿ ವಿಚಾರವಾಗಿ ರೈತರಿಗೆ ಸರ್ಕಾರ ನೋಟಿಸ್​ ನೀಡುತ್ತಿದೆ. ಇದರಿಂದ ರೈತರು ಕಂಗಾಲ ಆಗಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ರೈತರ ವಿರುದ್ಧ ಮತ್ತೊಂದು ಆದೇಶ ಹೊರಡಿಸಿದೆ ಎಂದು ಹೇಳಲಾಗಿದೆ. ಏನದು ಆದೇಶ? ಇಲ್ಲಿದೆ ಮಾಹಿತಿ

ಚಾಮರಾಜನಗರ, ಅಕ್ಟೋಬರ್​ 30: ವಕ್ಫ್ (Waqf)​​ ಆಸ್ತಿ ವಿಚಾರವಾಗಿ ರೈತರಿಗೆ (Farmers) ಸರ್ಕಾರ ನೋಟಿಸ್ ನೀಡುತ್ತಿದ್ದು, ಅನ್ನದಾತರಿಗೆ ತಲೆನೋವು ಶುರುವಾಗಿದೆ. ಇದರ ನಡುವೆ ಗಾಯದ ಮೇಲೆ ಬರೆ ಎಳೆದಂತೆ ರೈತರಿಂದ ಸಾಲ ಮರುಪಾವತಿ ಮಾಡಿಕೊಳ್ಳಲು ಸರ್ಕಾರ (Karnataka Government) ಕಠಿಣ ಕ್ರಮ ಕೈಗೊಂಡಿದೆ. ಇದರಿಂದ ರೈತರಿಗೆ ಸಂಕಷ್ಟ ಹೆಚ್ಚಿದೆ. ಸಹಕಾರ ಸಂಘಗಳ ಸುಸ್ತಿ ಸಾಲಕ್ಕೆ ಸರ್ಕಾರ ದಾವೆ ಪ್ರಕ್ರಿಯೆ ಆರಂಭಿಸಿದೆ.

ರೈತರು ಸಾಲ ಮರುಪಾವತಿಸಲು ವಿಫಲರಾಗಿ, ಸುಸ್ತಿಯಾದಲ್ಲಿ ಅವರಿಗೆ ತಿಳಿವಳಿಕೆ ಪತ್ರ ನೀಡಲು ಸರ್ಕಾರ ನಿರ್ಧರಿಸಿದೆ. ತಿಳಿವಳಿಕೆ ಪತ್ರದ ನಂತರವೂ ಸಾಲ ಮರುಪಾವತಿಸದಿದ್ದರೆ ಸಹಾಕಾರ ಸಂಘಗಳ ಕಾಯ್ದೆ ಕಲಂ 70ರ ಅಡಿ ದೂರು ದಾಖಲಿಸಿಕೊಳ್ಳಲು ತೀರ್ಮಾನ ಮಾಡಿದೆ. ಸರ್ಕಾರದ ಆದೇಶದ ಸರ್ಕಾರದ ಆದೇಶದ ವಿರುದ್ಧ ಚಾಮರಾಜನಗರ ಜಿಲ್ಲೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತಿವೃಷ್ಟಿ, ಅನಾವೃಷ್ಟಿ, ಕೊರೊನಾ ಮತ್ತು ಇತರೆ ಕಾರಣಗಳಿಂದ ರೈತರು ಸುಸ್ತಿಯಾಗಿದ್ದಾರೆ. ಸರ್ಕಾರ ಕೂಡಲೇ ತನ್ನ ಆದೇಶವನ್ನು ಹಿಂಪಡೆಯಬೇಕೆಂದು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಭಾಗ್ಯರಾಜ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More