ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ದುರ್ಬಳಕೆ ಮಾಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ

Updated on: Jan 05, 2024 | 2:45 PM

ಜೆಡಿಎಸ್ ನಾಯಕರು ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡರಲ್ಲದೆ ಪಕ್ಷದ ಪ್ರಮುಖ ನಾಯಕರು ಪಾಲ್ಗೊಂಡಿದ್ದರು. ರಾಮಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಗೋಧ್ರಾದಂಥ ಘಟನೆ ಕರ್ನಾಟಕದಲ್ಲಿ ಮರುಕಳಿಸಬಹುದು ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದನ್ನು ಕುಮಾರಸ್ವಾಮಿ ಖಂಡಿಸಿದರು.

ಬೆಂಗಳೂರು: ಕೆಲದಿನಗಳಿಂದ ನಾಪತ್ತೆಯಾದಂತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇಂದು ನಗರದಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದರು. ಅವರ ಮಿತ್ರಪಕ್ಷವಾದ ಬಿಜೆಪಿ, ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿಯ (Srikanth Pujari) ಬಂಧನ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ (protest) ನಡೆಸುತ್ತಿದ್ದರೂ ಕುಮಾರಸ್ವಾಮಿ ಮತ್ತು ಮತ್ತು ಅವರ ಪಕ್ಷದ ಪ್ರಮುಖರು ಜೊತೆಗೂಡದೆ ಹೋಗಿದ್ದು ಕನ್ನಡಿಗರಲ್ಲಿ ಅಚ್ಚರಿ ಮೂಡಿಸಿತ್ತು. ಅದಕ್ಕೆ ಬೇರೆ ಕಾರಣವಿದೆ ಅಂತ ಜನಕ್ಕೆ ಗೊತ್ತಿಲ್ಲದಿಲ್ಲ. ಇಲ್ಲಿ ಕುಮಾರಸ್ವಾಮಿ ಮಾತಾಡುವುದನ್ನು ಕೊಂಚ ಗಮನಿಸಿ. ಕಳೆದ ಎರಡು-ಮೂರು ದಿನಗಳಿಂದ ಅಂತ ಮೂರ್ನಾಲ್ಕು ಬಾರಿ ಹೇಳುತ್ತಾ ಅದರಲ್ಲೇ ಸುಮಾರು ಹೊತ್ತು ಗಿರಕಿ ಹೊಡೆಯುತ್ತಾರೆ. ಸ್ವಲ್ಪ ಸಮಯದವರೆಗೆ ಮಾಧ್ಯಮದವರೊಂದಿಗೆ ಮಾತಾಡದಿರುವುದು ಸಹ ಅವರ ತಡವರಿಕೆಗೆ ಕಾರಣವಾಗಿರಬಹುದು. ನಂತರ ವಿಷಯಕ್ಕೆ ಬರುವ ಅವರು 30 ವರ್ಷಗಳ ಹಿಂದಿನ ಪ್ರಕರಣ ಕೆದಕಿ, ಸುಳ್ಳು ಮೊಕದ್ದಮೆಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸುವ ಮೂಲಕ ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡುತ್ತಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More