ಬಿಟ್ ಕಾಯಿನ್ ಪ್ರಕರಣದ ಮರು ತನಿಖೆ ವಿಚಾರ: ಇಸ್ರೇಲ್ ಸಹಾಯ ಕೇಳುವ ಸಾಧ್ಯತೆ

Updated on: Jul 08, 2023 | 5:43 PM

ಇಸ್ರೇಲ್ ಕ್ರಿಪ್ಟೋ ವಾಲೆಟ್ ಗಳನ್ನ ವಶಪಡಿಸಿಕೊಳ್ಳುವಲ್ಲಿ ಸಾಕಷ್ಟು ನೈಪುಣ್ಯತೆ ಹೊಂದಿದೆ. ಆದರೆ ಭಾರತದಲ್ಲಿ ಆ ಟೆಕ್ನಾಲಜಿ ಕೊರತೆ ಇದೆ. ಇದಲ್ಲದೆ ಕರ್ನಾಟಕ ಬಿಟ್ಟರೆ ಬೇರೆಲ್ಲೂ ಕ್ರಿಪ್ಟೋ ಕರೆನ್ಸಿ ಹಗರಣಗಳು ನಡೆದಿಲ್ಲ.

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಮರು ತನಿಖೆ ವಿಚಾರವಾಗಿ ಬಿಟ್ ಕಾಯಿನ್ (Bitcoin scam) ವಶಕ್ಕೆ ಪಡೆಯಲು ಕರ್ನಾಟಕ ಸರ್ಕಾರವು (Karnataka Government) ಇಸ್ರೇಲ್ (Israel) ಸಹಾಯ ಕೇಳುವ ಸಾಧ್ಯತೆಯಿದೆ. ಇಸ್ರೇಲ್ ರಕ್ಷಣಾ ಇಲಾಖೆಯು ಉಗ್ರರಿಗೆ ಸಂದಾಯವಾಗುವ ಬಾಬತ್ತಿನಲ್ಲಿ ಹಮಾಸ್ ಉಗ್ರ ಸಂಘಟನೆಗೆ ಸೇರಿದ ಹಲವು ಕ್ರಿಪ್ಟೋ ವಾಲೆಟ್ ಗಳನ್ನ ವಶಕ್ಕೆ ಪಡೆದಿತ್ತು. ಇಸ್ರೇಲ್ ರಕ್ಷಣಾ ಇಲಾಖೆಯು ದೆಹಲಿ ಪೊಲೀಸರಿಗೂ ಈ ಬಗ್ಗೆ ಕಳೆದ ವರ್ಷ ಮಾಹಿತಿ ನೀಡಿತ್ತು. ಹೀಗಾಗಿ ಬಿಟ್ ಕಾಯಿನ್ ಹಗರಣದಲ್ಲಿ ಇಸ್ರೇಲ್ ನ ನ್ಯಾಷನಲ್ ಬ್ಯುರೋ ಫಾರ್ ಕೌಂಟರ್ ಟೆರರ್ ಫೈನಾನ್ಸ್ ಸಂಸ್ಥೆಯ ಸಹಾಯ ಕೇಳುವ ಸಾಧ್ಯತೆಯಿದೆ.

ಇಸ್ರೇಲ್ ಕ್ರಿಪ್ಟೋ ವಾಲೆಟ್ ಗಳನ್ನ ವಶಪಡಿಸಿಕೊಳ್ಳುವಲ್ಲಿ ಸಾಕಷ್ಟು ನೈಪುಣ್ಯತೆ ಹೊಂದಿದೆ. ಆದರೆ ಭಾರತದಲ್ಲಿ ಕ್ರಿಪ್ಟೋ ಕರೆನ್ಸಿಯನ್ನ ವಶಪಡಿಸಿಕೊಳ್ಳಲು ಬೇಕಾದ ಟೆಕ್ನಾಲಜಿ ಕೊರತೆ ಇದೆ. ಇದಲ್ಲದೆ ಕರ್ನಾಟಕ ಬಿಟ್ಟರೆ ಬೇರೆಲ್ಲೂ ಕ್ರಿಪ್ಟೋ ಕರೆನ್ಸಿ ಹಗರಣಗಳು ನಡೆದಿಲ್ಲ. ಹೀಗಾಗಿ ಇಸ್ರೇಲ್ ಸಹಾಯ ಕೇಳುವ ಸಾಧ್ಯತೆಯಿದೆ. ಈ ಹಿಂದೆ ಬೇರೆ ತನಿಖಾ ಏಜೆನ್ಸಿಗಳ ಸಹಾಯ ಪಡೆಯುವುದಾಗಿ ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಹೇಳಿದ್ದರು ಎಂಬುದು ಗಮನಾರ್ಹ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More