Anna Bhagya Scheme; ಸರ್ಕಾರ ಕೆಜಿ ಅಕ್ಕಿಗೆ ರೂ. 34 ನೀಡಲು ತಯಾರಿದ್ದರೂ ಎಫ್ ಸಿಐ ಮುಕ್ತ ಮಾರುಕಟ್ಟೆಯಲ್ಲಿ ರೂ. 31ರಂತೆ ಮಾರುತ್ತಿದೆ: ಕೆಹೆಚ್ ಮುನಿಯಪ್ಪ

Updated on: Jul 06, 2023 | 11:27 AM

ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿ ರಾಜ್ಯಕ್ಕೆ ಎಫ್ ಸಿ ಐನಿಂದ ಧಾನ್ಯಗಳನ್ನು ಕೊಳ್ಳುವ ಅಧಿಕಾರ ಇರುತ್ತದೆ. ಆದರೆ, ಆ ಅಧಿಕಾರವನ್ನೇ ಮೊಟಕುಗೊಳಿಸಲಾಗಿದೆ ಎಂದು ಸಚಿವ ಹೇಳಿದರು.

ದೆಹಲಿ: ಅನ್ನಭಾಗ್ಯ ಯೋಜನೆಯಡಿ (Anna Bhagya Scheme) ಬಿಪಿಎಲ್ ಕಾರ್ಡುದಾರರಿಗೆ ಚುನಾವಣೆಯಲ್ಲಿ ಭರವಸೆ ನೀಡಿದ ಹಾಗೆ ಅಕ್ಕಿ ಒದಗಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಪಡಿಪಾಟಲು ಮುಂದುವರಿಸಿದ್ದಾರೆ. ದೆಹಲಿಯಲ್ಲಿ ಭಾರತೀಯ ಆಹಾರ ನಿಗಮ ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಹೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ, ಎಫ್ ಸಿಐ (FCI) ಬಳಿ 15 ಲಕ್ಷ ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಇದೆ, ಆದರೆ ಕರ್ನಾಟಕ ಸರ್ಕಾಕ ಪ್ರತಿ ಕೆಜಿಗೆ ರೂ 34 ರಂತೆ ನೀಡಿ ಖರೀದಿಸುವುದಾಗಿ ಹೇಳಿದರೂ ನಿಗಮ ಅಕ್ಕಿ ನೀಡುತ್ತಿಲ್ಲ. ನಮಗೆ ನೀಡುವ ಬದಲು ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ರೂ. 31ರಂತೆ ಅಕ್ಕಿ ಮಾರಲಾಗುತ್ತಿದೆ ಎಂದು ಮುನಿಯಪ್ಪ ದೂರಿದರು. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿ ರಾಜ್ಯಕ್ಕೆ ಎಫ್ ಸಿ ಐನಿಂದ ಧಾನ್ಯಗಳನ್ನು ಕೊಳ್ಳುವ ಅಧಿಕಾರ ಇರುತ್ತದೆ. ಆದರೆ, ಆ ಅಧಿಕಾರವನ್ನೇ ಮೊಟಕುಗೊಳಿಸಿ, ರಾಜ್ಯ ಸರ್ಕಾರಕ್ಕೆ ದಾಸ್ತಾನು ಹೆಚ್ಚಿಸಿಕೊಳ್ಳುವ ಸಲಹೆ ನೀಡಲಾಗುತ್ತಿದೆ, ನಾವು ಅದನ್ನು 4.5 ಲಕ್ಷ ಮೆಟ್ರಿಕ್ ಟನ್ ಗಳಿಂದ 6 ಲಕ್ಷ ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಲು ಸಿದ್ಧರಿದ್ದೇವೆ ಎಂದು ಸಚಿವ ಮುನಿಯಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More