Bengaluru Stampede; ದಕ್ಷರನ್ನು ಸಸ್ಪೆಂಡ್ ಮಾಡಿ ರಾಜ್ಯದ ಜನತೆಗೆ ಸರ್ಕಾರ ಕೆಟ್ಟ ಸಂದೇಶ ನೀಡಿದೆ: ಹೆಚ್ ಡಿ ಕುಮಾರಸ್ವಾಮಿ

Updated By: ರಮೇಶ್ ಬಿ. ಜವಳಗೇರಾ

Updated on: Jun 06, 2025 | 11:24 PM

ಆದರೆ ಸಸ್ಪೆನ್ಷನ್ ಒಂದು ಕಣ್ಣೊರೆಸುವ ಯತ್ನ ಎಂದು ಅಧಿಕಾರಿಗಳಿಗೂ ಗೊತ್ತು, 15-20 ದಿನಗಳ ಕಾಲ ಅವರನ್ನು ಅಮಾನತ್ತಿನಲ್ಲಿಟ್ಟು ನಂತರ ಬಡ್ತಿ ನೀಡಿ ಸೇವೆಗೆ ಕರೆಸಿಕೊಳ್ಳಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಬೇಜಾರು ಮಾಡ್ಕೋಬೇಡಿ, ಇದೊಂದು ನಾಟಕ ಅಂತ ಸಸ್ಪೆಂಡ್ ಆಗಿರುವ ಅಧಿಕಾರಿಗಳಿಗೆ ಮೊದಲೇ ತಿಳಿಸಲಾಗಿರುತ್ತದೆ ಎಂದು ಕೇಂದ್ರ ಸಚಿವ ಹೇಳಿದರು.

ಬೆಂಗಳೂರು, ಜೂನ್ 6: ಬುಧವಾರ ನಡೆದ ಕಾಲ್ತುಳಿತದ ಘಟನೆ ಮತ್ತು 11 ಅಮಾಯಕ ಜನರ ಸಾವಿಗೆ ಸಿದ್ದರಾಮಯ್ಯ ಸರ್ಕಾರವೇ (Siddaramaiah government) ನೇರ ಹೊಣೆಯಾಗಿದ್ದರೂ ಬೆಂಗಳೂರು ನಗರದ ಪೊಲೀಸ್ ಕಮೀಷನರ್ ಬಿ ದಯಾನಂದ ಮತ್ತು ಇತರ ದಕ್ಷ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ಸರ್ಕಾರ ಒಂದು ಕೆಟ್ಟ ಸಂದೇಶವನ್ನು ರಾಜ್ಯದ ಜನತೆಗೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ದಯಾನಂದ್ ದಕ್ಷತೆ ಬಗ್ಗೆ ಹೇಳೋದಾದರೆ, ಹೊಸ ವರ್ಷದಾಚರಣೆ ಸಂದರ್ಭದಲ್ಲಿ ಅವರೇ ನಗರದ ಪೊಲೀಸ್ ಕಮೀಷನರ್ ಅಗಿದ್ದರು, ಎಂಜಿ ರೋಡ್ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಲಕ್ಷಾಂತರ ಜನ ಸೇರಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ವ್ಯವಸ್ಥೆ ಮಾಡಿದ್ದರು, ಅಂಥ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ:  ಬೆಂಗಳೂರು ಕಾಲ್ತುಳಿತ ಕೇಸ್ ಸಿಐಡಿಗೆ, ಬೆಂಗಳೂರು ಕಮಿಷನರ್, ಎಸಿಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್  

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 06, 2025 01:46 PM