ಕರ್ನಾಟಕ ಬಂದ್; ಸರ್ಕಾರ ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ: ಸಾರಾ ಗೋವಿಂದು

ಅರುಣ್​ ಕುಮಾರ್​ ಬೆಳ್ಳಿ

Updated on: Mar 22, 2025 | 1:30 PM

ಹನಿ ಟ್ರ್ಯಾಪ್ ಪ್ರಕರಣವನ್ನೂ ಪ್ರಸ್ತಾಪಿಸಿದ ಸಾರಾ ಗೋವಿಂದು ಅದನ್ನು ಮಾಡುವವರಿಗೆ ಮತ್ತು ಅದನ್ನೇ ಮುಂದಿಟ್ಟುಕೊಂಡು ಸದನದಲ್ಲಿ ಗಲಾಟೆ ಮಾಡುವವರಿಗೆ ನಾಚಿಕೆ ಇಲ್ಲ, ಎಲ್ಲರಿಗೂ ಅಧಿಕಾರದ ತೆವಲಿನ ಚಿಂತೆ, ಎಂಇಎಸ್ಅನ್ನು ನಿಷೇಧಿಸುತ್ತೇವೆ ಮತ್ತು ಮಹಾದಾಯಿ ಯೋಜನೆ ಜಾರಿಗೆ ತರಲು ಸರ್ಕಾರ ಗಡುವು ನೀಡಲಿ, ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಲಿ, ನಾಲ್ಕು ಜಿಲ್ಲೆಗಳ ಜನ ಕುಡಿಯುವ ನೀರಿಗಾಗಿ ಒದ್ದಾಡುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರು, 22 ಮಾರ್ಚ್: ಕನ್ನಡ ಭಾಷೆ, ನೆಲ ಮತ್ತು ಜಲದ ಪರವಾಗಿ ನಾವು ನಿನ್ನೆ ಮೊನ್ನೆಯಿಂದ ಹೋರಾಟ ಮಾಡುತ್ತಿಲ್ಲ, ನಮ್ಮ ನಾಯಕರಾದ ವಾಟಾಳ್ ನಾಗರಾಜ್ (Vatal Nagaraj) ಅವರು 60 ವರ್ಷಗಳಿಂದ ಹೋರಾಡುತ್ತಿದ್ದರೆ ತಾನು 40 ವರ್ಷಗಳಿಂದ ಹೋರಾಟ ಮಾಡುತ್ತಿರುವುದಾಗಿ ಕನ್ನಡ ಪರ ಹೋರಾಟಗಾರ ಸಾರಾ ಗೋವಿಂದು ಹೇಳಿದರು. ಆದರೆ ಕರ್ನಾಟಕ ಸರ್ಕಾರ ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ, ಇಂಥ ಪರಿಸ್ಥಿತಿ ಹಿಂದೆ ಯಾವತ್ತೂ ಉದ್ಭವಿಸಿರಲಿಲ್ಲ, ನಮ್ಮ ನಾಯಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ, ಪಾಪ ಅವರಾದರೂ ಏನು ಮಾಡಿಯಾರು? ಸರ್ಕಾರದ ಆದೇಶವನ್ನು ಪಾಲಿಸುತ್ತಿದ್ದಾರೆ ಎಂದು ಗೋವಿಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಡಿಕೆಶಿ ಹೇಳಿಕೆಗೆ ಸಾರಾ ಗೋವಿಂದು ಉತ್ತರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.