ಸರ್ಕಾರದಿಂದ ಹೊರಬಿತ್ತು ಅಧಿಕೃತ ಆದೇಶ: RSS ಸೇರಿ ಇತರೆ ಸಂಘಟನೆಗಳಿಗೆ ಬಿತ್ತು ಮೂಗುದಾರ

Updated on: Oct 18, 2025 | 9:50 PM

ಆರ್​ ಎಸ್​​ಎಸ್​ ಸೇರಿದಂತೆ ಇತರೆ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯವಾಗಿದೆ. ಮೊನ್ನೆ ಸಚಿವ ಸಂಪುಟ ಸಭೆಯ ನಿರ್ಧಾರದಂತೆ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇಂದು (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದೆ.

ಬೆಂಗಳೂರು, (ಅಕ್ಟೋಬರ್ 18): ಆರ್​ ಎಸ್​​ಎಸ್​ ಸೇರಿದಂತೆ ಇತರೆ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯವಾಗಿದೆ. ಮೊನ್ನೆ ಸಚಿವ ಸಂಪುಟ ಸಭೆಯ ನಿರ್ಧಾರದಂತೆ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇಂದು (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ, ಉದ್ಯಾನವನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳಲ್ಲಿ ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಾರ್ವಜನಿಕ ರಸ್ತೆಗಳು, ಸರ್ಕಾರದ ಇತರೆ ಆಸ್ತಿ ಮತ್ತು ಸ್ಥಳಗಳಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಅಯುಕ್ತರು ಮತ್ತು ಪೊಲೀಸ್ ಅಧೀಕ್ಷಕರು ಸಂವಿಧಾನ ಬದ್ಧ ನಾಗರಿಕ ಹಕ್ಕುಗಳಿಗೆ ಚ್ಯುತಿ ಉಂಟಾಗದಂತೆ ಮಾರ್ಗಸೂಚಿ ಹೊರಡಿಸಬೇಕು. ಯಾವುದೇ ಚಟುವಟಿಕೆ ಸಾರ್ವಜನಿಕರಿಗೆ ಅನಾನುಕೂಲ ಮತ್ತು ಸಂಸ್ಥೆಗಳ ಮೂಲ ಧ್ಯೇಯಕ್ಕೆ ಧಕ್ಕೆ ಉಂಟಾಗುವುದಾದಲ್ಲಿ ಸಕ್ಷಮ ಪ್ರಾಧಿಕಾರಗಳು ಅನುಮತಿ ನಿರಾಕರಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಒಳಾಡಳಿತ ಇಲಾಖೆ ಸೂಚನೆ ನೀಡಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More