ದರ್ಶನ್ ಸಲುವಾಗಿ ಜೈಲು ಅಧಿಕಾರಿಗಳ ಕರ್ತವ್ಯ ಲೋಪ; ಗೃಹ ಸಚಿವರಿಗೆ ಪ್ರಶ್ನೆಗಳ ಸುರಿಮಳೆ
ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ಗೆ ವಿಐಪಿ ಟ್ರೀಟ್ಮೆಂಟ್ ನೀಡಲಾಗಿದೆ. ಸಿಗರೇಟ್, ಮೊಬೈಲ್, ರೌಡಿಗಳ ಸಂಪರ್ಕ ಸೇರಿದಂತೆ ಹಲವು ಅಕ್ರಮಗಳು ಜೈಲಿನಲ್ಲಿ ನಡೆದಿವೆ. ರೌಡಿಶೀಟರ್ಗಳ ಜೊತೆ ದರ್ಶನ್ ಸಿಗರೇಟು ಸೇದಿದ್ದು, ವಿಡಿಯೋ ಕಾಲ್ ಮಾಡಿದ್ದು ಬಹಿರಂಗ ಆದ ಬಳಿಕ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಒಟ್ಟಾರೆ ಪ್ರಕರಣದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಕೊಲೆ ಆರೋಪಿ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ. ಅಷ್ಟಕ್ಕೂ ಕಾರಾಗೃಹದಲ್ಲಿ ಇಂಥ ಅಕ್ರಮಗಳು ನಡೆಯಲು ಹೇಗೆ ಸಾಧ್ಯ ಎಂದು ಸರ್ಕಾರವನ್ನು ಜನರು ಪ್ರಶ್ನಿಸುತ್ತಿದ್ದಾರೆ. ಇಂದು (ಆಗಸ್ಟ್ 26) ಗೃಹಸಚಿವ ಜಿ. ಪರಮೇಶ್ವರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಅವರಿಗೆ ಪ್ರಶ್ನೆಗಳ ಸುರಿಮಳೆ ಆಯಿತು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು

ಸಂಬಂಧಿಯ ಡಿಎನ್ಎ ಜೊತೆ ಮೃತರ ಡಿಎನ್ಎ ಮ್ಯಾಚ್ ಆದರೆ ದೇಹ ಹಸ್ತಾಂತರ

ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್

Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
