ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಬೆಚ್ಚಿಬಿದ್ದ ಕೈದಿಗಳು: ಮೊಬೈಲ್, ಗಾಂಜಾ, ಆಯುಧಗಳು ಜಪ್ತಿ
ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಕರ್ನಾಟಕದ ಜೈಲುಗಳಲ್ಲಿ ಮೆಗಾ ಕಾರ್ಯಾಚರಣೆ ನಡೆಸಲಾಗಿದೆ. ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿ ಮೊಬೈಲ್ ಫೋನ್ಗಳು, ಚಾಕುಗಳು ಮತ್ತು ಗಾಂಜಾ ಸೇರಿದಂತೆ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 36 ಗಂಟೆಗಳ ಕಾಲ ನಡೆದ ಈ ದಾಳಿಯಲ್ಲಿ ಕೈದಿಗಳು ನಡೆಸುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ.
ಬೆಂಗಳೂರು, ಡಿಸೆಂಬರ್ 17: ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಕರ್ನಾಟಕದ ಜೈಲುಗಳಾದ್ಯಂತ ಭಾರಿ ಕಾರ್ಯಾಚರಣೆ ನಡೆಸಲಾಗಿದ್ದು, ಕೈದಿಗಳಿಂದ ಮೊಬೈಲ್ ಫೋನ್ಗಳು, ಶಸ್ತ್ರಾಸ್ತ್ರಗಳು ಮತ್ತು ಇತರ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಸಿದ ವಿಶೇಷ ತಪಾಸಣೆಯಲ್ಲಿ 6 ಮೊಬೈಲ್ ಫೋನ್ಗಳು ಮತ್ತು 4 ಚಾಕುಗಳು ಪತ್ತೆಯಾಗಿವೆ. ಮೋಜು ಮಸ್ತಿ ಮಾಡುತ್ತಿದ್ದ ಕೈದಿಗಳಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಮೈಸೂರು ಜೈಲಿನಲ್ಲಿ 9 ಫೋನ್ಗಳು ಮತ್ತು 11 ಸಿಮ್ ಕಾರ್ಡ್ಗಳು ಪತ್ತೆಯಾಗಿವೆ. ಬೆಳಗಾವಿ ಜೈಲಿನಲ್ಲಿ 4 ಫೋನ್ಗಳು ಮತ್ತು 366 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ವೇಳೆ ಆರೋಪಿಗಳು ಗಾಂಜಾವನ್ನು ಹೊರಗೆ ಎಸೆದಿದ್ದರು ಎನ್ನಲಾಗಿದೆ. ಮಂಗಳೂರು ಜೈಲಿನಲ್ಲಿಯೂ 4 ಮೊಬೈಲ್ ಫೋನ್ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
