ವಿಧಾನಸಭೆ ಆವರಣದಲ್ಲಿ ಗ್ರೂಫ್‌ ಫೋಟೋಶೂಟ್; ಡಿಕೆಶಿ, ಹೆಚ್​ಡಿಕೆ ಗೈರು, ಫೋಟೋಗೆ ಪೋಸ್ ​ಕೊಟ್ಟ ಸಿದ್ದು, ಬೊಮ್ಮಾಯಿ

Rakesh Nayak Manchi

Updated on: Feb 20, 2023 | 7:45 PM

ಫೆಬ್ರವರಿ 10ರಿಂದ ಆರಂಭವಾದ ಕರ್ನಾಟಕ ವಿಧಾನಸಭೆಯ ಬಜೆಟ್​​ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸೌಧದ ಆವರಣದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್ ನಡೆಯಿತು. ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕರು ಫೋಟೋಗೆ ಪೋಸ್ ಕೊಟ್ಟರು.

ಫೆಬ್ರವರಿ 10ರಿಂದ ಆರಂಭವಾದ ಕರ್ನಾಟಕ ವಿಧಾನಸಭೆಯ ಬಜೆಟ್​​ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸೌಧದ ಆವರಣದಲ್ಲಿ ಶಾಸಕರ ಗ್ರೂಪ್ ಫೋಟೋ (Karnataka MLA’s Group Photoshoot) ಶೂಟ್ ನಡೆಯಿತು. 15ನೇ ವಿಧಾನಸಭೆಯ ಕೊನೇಯ ಅಧಿವೇಶನ ಹಿನ್ನಲೆ ನಡೆದ ಫೋಟೋಶೂಟ್‌ನಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B.S.Yediyurappa) ಸೇರಿದಂತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರು ಭಾಗಿಯಾಗಿದರು. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಫೋಟೋಶೂಟ್​ಗೆ ಗೈರಾದರು.

ಇದನ್ನೂ ಓದಿ: ಸದನದಲ್ಲೂ ಪ್ರತಿಧ್ವನಿಸಿದ ಮಹಿಳಾ ಐಎಎಸ್‌ vs ಐಪಿಎಸ್‌ ವಾರ್‌; ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಕ್ಸಮರ

ಮತ್ತಷ್ಟು ವಿಡಿಯೋ ಸ್ಟೋರಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Feb 20, 2023 07:41 PM
Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.