Karnataka Legislative Assembly, Live: ವಿಧಾನ ಸಭೆ ಅಧಿವೇಶನ, ಬುಧವಾರದ ಕಾರ್ಯಕಲಾಪಗಳ ನೇರ ಪ್ರಸಾರ

Edited By:

Updated on: Jul 19, 2023 | 11:39 AM

ವಿಧಾನ ಸಭೆಯಲ್ಲಿ ನಡೆಯತ್ತಿರುವ ಕಾರ್ಯಕಲಾಪಗಳ ನೇರ ಪ್ರಸಾರ.

ಬೆಂಗಳೂರು: ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನವನ್ನು (Assembly Session) ಜುಲೈ 22ರವರೆಗೆ ವಿಸ್ತರಿಸಕಗಿದೆ. ವಿಧಾನ ಸಭೆಯಲ್ಲಿ ಬುಧವಾರದ ಕಾರ್ಯಕಲಾಪಗಳು ಅರಂಭವಾಗಿದೆ. ನಿನ್ನೆ ಅಂದರೆ ಮಂಗಳವಾರ ಬೆಂಗಳೂರಲ್ಲಿ ರಾಷ್ಟ್ರೀಯ ವಿರೋಧ ಪಕ್ಷಗಳ ಸಭೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಅವರ ಸಂಪುಟದ ಹಲವಾರು ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಹಾಗಾಗಿ, ಸದನದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರ ಸದಸ್ಯರಿದ್ದರು. ಬಿಜೆಪಿ ನಾಯಕ ಸುರೇಶ್ ಕುಮಾರ್ (Suresh Kumar) ಅಧಿವೇಶನವನ್ನು ತಾಜ್ ವೆಸ್ಟೆಂಡ್ ಹೋಟೆಲ್ ಗೆ ಶಿಫ್ಟ್ ಮಾಡಿ ಅಂತ ಗೇಲಿ ಕೂಡ ಮಾಡಿದರು. ಇಂದು ಅದೇ ವಿಷಯದ ಮೇಲೆ ಬಿಸಿ ಬಿಸಿ ಚರ್ಚೆಯಾಗುವ ಸಾಧ್ಯತೆ ಇದೆ. ವಿಧಾನ ಸಭೆಯಲ್ಲಿ ನಡೆಯತ್ತಿರುವ ಕಾರ್ಯಕಲಾಪಗಳ ನೇರ ಪ್ರಸಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 19, 2023 11:23 AM