AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Legislative Assembly Session Live: ವಿಧಾನಸಭೆ ಬಜೆಟ್ ಅಧಿವೇಶನದ ನೇರಪ್ರಸಾರ

Karnataka Legislative Assembly Session Live: ವಿಧಾನಸಭೆ ಬಜೆಟ್ ಅಧಿವೇಶನದ ನೇರಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Jul 11, 2023 | 11:52 AM

Share

ವಿಧಾನ ಸಬೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ

ಬೆಂಗಳೂರು: ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ (Budget Session) ಮಂಗಳವಾರದ ಕಾರ್ಯಕಲಾಪಗಳು ಅರಂಭವಾಗಿವೆ. ಸೋಮವಾರ ಸದನದಲ್ಲಿ ಜೈನಮುನಿಯವರ ಹತ್ಯೆ ಪ್ರಕರಣದ ಬಗ್ಗೆಯೇ ದಿನವಿಡೀ ಚರ್ಚೆಯಾಯಿತು. ಹತ್ಯೆ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಖುದ್ದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಸೋಮವಾರದಂದು ಹುಬ್ಬಳ್ಳಿ ಮತ್ತು ತಿಕೋಟಾಗೆ ಪೊಲೀಸ್ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದರು. ವಿವರಗಳನ್ನು ಇಂದು ಸದನದಲ್ಲಿ ಹೇಳಲಿದ್ದಾರೆ ಅಂತ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದರು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಸದಸ್ಯರ ಜೊತೆ ರಾಜ್ಯದ ಜನತೆ ಸಹ ಜೈನಮುನಿಗಳ ಹತ್ಯೆ ಬಗ್ಗೆ ತಿಳಿಯಲು ಕಾತುರವಾಗಿದೆ. ವಿಧಾನ ಸಬೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Jul 11, 2023 11:52 AM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.