Karnataka Legislative Council, Live: ವಿಧಾನ ಪರಿಷತ್ ಅಧಿವೇಶನ, ಮಂಗಳವಾರದ ಕಾರ್ಯಕಲಾಪಗಳ ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ

Updated on: Jul 18, 2023 | 11:52 AM

ವಿಧಾನ ಪರಿಷತ್ ನಲ್ಲಿ ನಡೆಯತ್ತಿರುವ ಕಾರ್ಯಕಲಾಪಗಳ ನೇರ ಪ್ರಸಾರ.

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ನಲ್ಲಿ (Legislative Council) ಅಧಿವೇಶನ ಮಂಗಳವಾರದ ಕಾರ್ಯಕಲಾಪಗಳು ಅರಂಭಗೊಂಡಿವೆ. ಸದನ ಆರಂಭವಾಗುತ್ತಿದ್ದಂತೆಯೇ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಅವರು ಬಿಜೆಪಿ ಸದಸ್ಯ ನಾರಾಯಣಸ್ವಾಮಿ (Narayanaswamy) ಅವರ ಮೇಲೆ ರೇಗಿದರು. ಪೊಲೀಸ್ ಪ್ರಕರವವೊಂದನ್ನು ಪ್ರಸ್ತಾಪಿಸುವಾಗ ಧಿಕ್ಕಾರ ಅಂತ ಪದ ಬಳಸಿದ್ದು, ಸಭಾಪತಿಗಳಿಗೆ ಸರಿಯೆನ್ನಿಸಲಿಲ್ಲ. ಕೂಡಲೇ ಅವರು ಸದಸ್ಯರನ್ನು ಕುರಿತು ಧಿಕ್ಕಾರದಂಥ ಪದಗಳನ್ನು ಬಳಸಿದರೆ ನಿಮ್ಮ ಮಾತು ಕಡತ ಸೇರುವುದಿಲ್ಲ ಎನ್ನುತ್ತಾರೆ. ನಂತರ ನಾರಾಯಣಸ್ವಾಮಿ ಎತ್ತಿದ ಪ್ರಶ್ನೆಗೆ ಗೃಹ ಸಚಿವ ಜಿ ಪರಮೇಶ್ವರ ಉತ್ತರ ನೀಡುತ್ತಾರೆ. ವಿಧಾನ ಪರಿಷತ್ ನಲ್ಲಿ ನಡೆಯತ್ತಿರುವ ಕಾರ್ಯಕಲಾಪಗಳ ನೇರ ಪ್ರಸಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.