AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka LPG Gas Shortage: ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್

Karnataka LPG Gas Shortage: ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್

ಭಾವನಾ ಹೆಗಡೆ
|

Updated on: Mar 16, 2026 | 9:58 AM

Share

ಕರ್ನಾಟಕದಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆಯು ಹೋಟೆಲ್ ಉದ್ಯಮಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ತೈಲ ಪೂರೈಕೆಯಲ್ಲಿನ ಸಮಸ್ಯೆಯು ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಹಲವು ವರ್ಷಗಳ ಇತಿಹಾಸವಿರುವ ಎಮ್​ಟಿಆರ್​ನಂತಹ ಪ್ರತಿಷ್ಠಿತ ಹೋಟೆಲ್‌ಗಳು ಗ್ಯಾಸ್ ಅಭಾವದಿಂದಾಗಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಅಥವಾ ಮೆನುಗಳನ್ನು ಮೊಟಕುಗೊಳಿಸುವ ಪರಿಸ್ಥಿತಿ ಎದುರಿಸುತ್ತಿವೆ. ಬನಶಂಕರಿಯ ಫುಡ್ ಸ್ಟ್ರೀಟ್‌ಗಳು ಮತ್ತು ಮಲ್ಲೇಶ್ವರಂನ ಹೋಟೆಲ್‌ಗಳಲ್ಲಿ ಜನಸಂದಣಿ ಕಡಿಮೆಯಾಗಿದೆ.

ಬೆಂಗಳೂರು, ಮಾರ್ಚ್​ 16: ಕರ್ನಾಟಕದಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆಯು ಹೋಟೆಲ್ ಉದ್ಯಮಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ತೈಲ ಪೂರೈಕೆಯಲ್ಲಿನ ಸಮಸ್ಯೆಯು ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಹಲವು ವರ್ಷಗಳ ಇತಿಹಾಸವಿರುವ ಎಮ್​ಟಿಆರ್​ನಂತಹ ಪ್ರತಿಷ್ಠಿತ ಹೋಟೆಲ್‌ಗಳು ಗ್ಯಾಸ್ ಅಭಾವದಿಂದಾಗಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಅಥವಾ ಮೆನುಗಳನ್ನು ಮೊಟಕುಗೊಳಿಸುವ ಪರಿಸ್ಥಿತಿ ಎದುರಿಸುತ್ತಿವೆ. ಬನಶಂಕರಿಯ ಫುಡ್ ಸ್ಟ್ರೀಟ್‌ಗಳು ಮತ್ತು ಮಲ್ಲೇಶ್ವರಂನ ಹೋಟೆಲ್‌ಗಳಲ್ಲಿ ಜನಸಂದಣಿ ಕಡಿಮೆಯಾಗಿದೆ.

ಈ ಬಿಕ್ಕಟ್ಟಿನ ನಡುವೆ, ವಾಣಿಜ್ಯ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿವೆ. 1,800 ರೂಪಾಯಿ ಬೆಲೆಯ ಸಿಲಿಂಡರ್‌ಗಳನ್ನು 4,000-5,000 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಈ ಅಕ್ರಮ ಮಾರಾಟದ ವಿರುದ್ಧ ಪೀಣ್ಯ, ಚಿಕ್ಕಜಾಲ ಮತ್ತು ಕಿಂಗೇರಿ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಅನಿಲ ಕೊರತೆಯನ್ನು ನಿಭಾಯಿಸಲು ಪೆಟ್ರೋಲಿಯಂ ಸಚಿವಾಲಯವು ಪೈಪ್‌ಲೈನ್ ಗ್ಯಾಸ್ (ಪಿಎನ್‌ಜಿ) ಸಂಪರ್ಕ ಹೊಂದಿರುವವರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಹೊಸ ನಿಯಮ ಜಾರಿಗೆ ತಂದಿದೆ. ಈ ಬಿಕ್ಕಟ್ಟು ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಎಂದು ವಿಶ್ಲೇಷಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

 

 

Follow Us