ಸಚಿವ ಸಂಪುಟ ಪುನಾರಚನೆ ವದಂತಿ: ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು

Edited By:

Updated on: May 22, 2026 | 12:50 PM

ಕರ್ನಾಟಕ ಸಚಿವ ಸಂಪುಟ ಪುನರಚನೆ ಚರ್ಚೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಸಚಿವಾಕಾಂಕ್ಷಿ ಶಾಸಕರು ಮತ್ತು ಹಾಲಿ ಸಚಿವರು ದೆಹಲಿಗೆ ದೌಡಾಯಿಸಿದ್ದಾರೆ. ಕೃಷ್ಣ ಬೈರೇಗೌಡ, ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸೇರಿದಂತೆ ಐವರು ನಾಯಕರು ಹೈಕಮಾಂಡ್ ಭೇಟಿಯಾಗಿ, ತಮ್ಮನ್ನು ಸಂಪುಟದಲ್ಲಿ ಉಳಿಸಿಕೊಳ್ಳಲು ಅಥವಾ ಪರಿಗಣಿಸಲು ಮನವಿ ಮಾಡಲಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ನವದೆಹಲಿ/ಬೆಂಗಳೂರು, ಮೇ 22: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ಬೆಳವಣಿಗೆಗಳ ನಡುವೆ, ಸಚಿವಾಕಾಂಕ್ಷಿ ಶಾಸಕರು ಮತ್ತು ಹಾಲಿ ಸಚಿವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿಯಾಗಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸೇರಿದಂತೆ ಐವರು ನಾಯಕರು ದೆಹಲಿಗೆ ತೆರಳಿದ್ದಾರೆ. ಕೃಷ್ಣ ಬೈರೇಗೌಡರು ತಮ್ಮ ಸಚಿವ ಸ್ಥಾನವನ್ನು ಮುಂದುವರಿಸಲು ಬೇಡಿಕೆ ಇಡುವ ಸಾಧ್ಯತೆ ಇದೆ. ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದಾರೆ. ಹೈಕಮಾಂಡ್ ಭೇಟಿ ಮಾಡಿ ತಮ್ಮನ್ನು ಸಂಪುಟ ಪುನರಚನೆಯಲ್ಲಿ ಪರಿಗಣಿಸುವಂತೆ ಮನವಿ ಮಾಡಿಕೊಳ್ಳುವ ಉದ್ದೇಶದಿಂದ ಇವರು ದೆಹಲಿಗೆ ಬಂದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಶಾಸಕರ ಈ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮತ್ತು ಮುಂದಿನ ದಿನಗಳಲ್ಲಿ ಮಹತ್ವದ ಬೆಳವಣಿಗೆಗಳಿಗೆ ವೇದಿಕೆ ಸೃಷ್ಟಿಸುವ ನಿರೀಕ್ಷೆಯಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More