ಸಿಎಂ ಇಬ್ರಾಹಿಂಗೆ ರಾಜಕೀಯದಲ್ಲಿ ದೊಡ್ಡ ವ್ಯಾಲ್ಯೂ ಇದೆ, ಬಿಜೆಪಿಗೆ ಕರೆತರಲು ನಾಯಕರೊಂದಿಗೆ ಮಾತನಾಡುವೆ: ಸಚಿವ ಶ್ರೀರಾಮುಲು
CM Ibrahim: ಬಿಜೆಪಿಯಲ್ಲಿ ಅಲ್ಪಸಂಖ್ಯಾತ ನಾಯಕರ ಕೊರತೆ ಇದೆ. ಸಿಎಂ ಇಬ್ರಾಹಿಂ ಅವರನ್ನು ಬಿಜೆಪಿಗೆ ಕರೆತರುವ ಯತ್ನ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಸಾರಿಗೆ ಸಚಿವ ಶ್ರೀರಾಮುಲು ಬಳ್ಳಾರಿಯಲ್ಲಿ ಉತ್ತರಿಸಿದ್ದಾರೆ.
ಬಳ್ಳಾರಿ: ಸಿ.ಎಂ.ಇಬ್ರಾಹಿಂ ಬಿಜೆಪಿಗೆ ಬರುತ್ತಾರೆ ಎಂದರೆ ನಮ್ಮ ನಾಯಕರು ಬೇಡ ಎನ್ನುವುದಿಲ್ಲವೆಂದು ಸಾರಿಗೆ ಸಚಿವ ಶ್ರೀರಾಮುಲು (B Sriramulu) ಹೇಳಿದ್ದಾರೆ. ಬಳ್ಳಾರಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇಬ್ರಾಹಿಂ (CM Ibrahim) ನನ್ನ ಜೊತೆ ಅನೇಕ ಬಾರಿ ಮಾತಾಡಿದ್ದಾರೆ. ಸಿಎಂ ಇಬ್ರಾಹಿಂ ಚಲಾವಣೆಯಲ್ಲಿರುವಂತಹ ನಾಣ್ಯ. ಅವರಿಗೆ ದೊಡ್ಡ ವ್ಯಾಲ್ಯೂ ಇದೆ ಎಂದು ಶ್ರೀರಾಮುಲು ನುಡಿದಿದ್ದಾರೆ. ಕಾಂಗ್ರೇಸ್ ಬಿಡುವುದಾಗಿ ಇಬ್ರಾಹಿಂ ಹಲವು ಬಾರಿ ಹೇಳಿದ್ದಾರೆ. ಅವರನ್ನು ಬಿಜೆಪಿಗೆ ಕರೆತರಲು ನಾಯಕರೊಂದಿಗೆ ಚರ್ಚಿಸುವೆ. ಸಿ.ಎಂ.ಇಬ್ರಾಹಿಂ ಬಿಜೆಪಿಗೆ ಬಂದರೆ ನಾಯಕರು ಬೇಡ ಎನ್ನುವುದಿಲ್ಲ ಎಂದು ನುಡಿದಿದ್ದಾರೆ ಶ್ರೀರಾಮುಲು.
ಇದನ್ನೂ ಓದಿ:
ಸಿದ್ದರಾಮಯ್ಯಗೆ ರಾಜಕೀಯ ಮರುಹುಟ್ಟು ನೀಡಿದ್ದಕ್ಕೆ ಅವರಿಂದ ಒಳ್ಳೆಯ ಉಡುಗೊರೆ ಸಿಕ್ಕಿದೆ! ಸಿ ಎಮ್ ಇಬ್ರಾಹಿಂ
ಕಾಂಗ್ರೆಸ್ನತ್ತ ಮುಖ ಮಾಡಿದ್ರಾ ಜೆಡಿಎಸ್ ಶಾಸಕ? ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಭೇಟಿ
Loading...
Unable to load recommendations.
Follow Us
