AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್​ಟಿ ದರ ಭಾರಿ ಇಳಿಕೆ: ಗೃಹ ಸಚಿವ ಪರಮೇಶ್ವರ್​ ಏನಂದರು ನೋಡಿ

ಜಿಎಸ್​ಟಿ ದರ ಭಾರಿ ಇಳಿಕೆ: ಗೃಹ ಸಚಿವ ಪರಮೇಶ್ವರ್​ ಏನಂದರು ನೋಡಿ

ಗಣಪತಿ ಶರ್ಮಾ
|

Updated on: Sep 04, 2025 | 11:55 AM

Share

ಕೇಂದ್ರ ಸರ್ಕಾರದ ಜಿಎಸ್​ಟಿ ದರ ಕಡಿತದ ಕುರಿತು ಗೃಹ ಸಚಿವ ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಜನರಿಗೆ ಅಗತ್ಯವಾದ ವಸ್ತುಗಳ ಮೇಲಿನ ಜಿಎಸ್​ಟಿ ದರ ಕಡಿತವನ್ನು ಅವರು ಸ್ವಾಗತಿಸಿದ್ದಾರೆ. ಆದರೆ, ರಾಜ್ಯಗಳಿಗೆ ಆಗುವ ಆರ್ಥಿಕ ನಷ್ಟದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಈ ನಷ್ಟವನ್ನು ಸರಿದೂಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 4: ಕೇಂದ್ರ ಸರ್ಕಾರದ ಜಿಎಸ್​ಟಿ ಕಡಿತ ನಿರ್ಧಾರವನ್ನು ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಸ್ವಾಗತಿಸಿದ್ದಾರೆ. ಅದೇ ರೀತಿ, ಕರ್ನಾಟಕಕ್ಕೆ 70,000 ಕೋಟಿ ರೂಪಾಯಿಗಳಷ್ಟು ನಷ್ಟವಾಗಬಹುದು ಎಂಬ ಆತಂಕದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೆಲವು ಅಗತ್ಯ ವಸ್ತುಗಳಿಗೆ 0% ಅಥವಾ 5% ಜಿಎಸ್​ಟಿ ಮಾಡಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಕೆಲವು ವಸ್ತುಗಳ ಮೇಲಿನ ಜಿಎಸ್ಟಿ ದರಗಳು ಇನ್ನೂ ಹೆಚ್ಚೇ ಇವೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More