ಜಿಎಸ್ಟಿ ದರ ಭಾರಿ ಇಳಿಕೆ: ಗೃಹ ಸಚಿವ ಪರಮೇಶ್ವರ್ ಏನಂದರು ನೋಡಿ
ಕೇಂದ್ರ ಸರ್ಕಾರದ ಜಿಎಸ್ಟಿ ದರ ಕಡಿತದ ಕುರಿತು ಗೃಹ ಸಚಿವ ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಜನರಿಗೆ ಅಗತ್ಯವಾದ ವಸ್ತುಗಳ ಮೇಲಿನ ಜಿಎಸ್ಟಿ ದರ ಕಡಿತವನ್ನು ಅವರು ಸ್ವಾಗತಿಸಿದ್ದಾರೆ. ಆದರೆ, ರಾಜ್ಯಗಳಿಗೆ ಆಗುವ ಆರ್ಥಿಕ ನಷ್ಟದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಈ ನಷ್ಟವನ್ನು ಸರಿದೂಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 4: ಕೇಂದ್ರ ಸರ್ಕಾರದ ಜಿಎಸ್ಟಿ ಕಡಿತ ನಿರ್ಧಾರವನ್ನು ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಸ್ವಾಗತಿಸಿದ್ದಾರೆ. ಅದೇ ರೀತಿ, ಕರ್ನಾಟಕಕ್ಕೆ 70,000 ಕೋಟಿ ರೂಪಾಯಿಗಳಷ್ಟು ನಷ್ಟವಾಗಬಹುದು ಎಂಬ ಆತಂಕದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೆಲವು ಅಗತ್ಯ ವಸ್ತುಗಳಿಗೆ 0% ಅಥವಾ 5% ಜಿಎಸ್ಟಿ ಮಾಡಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಕೆಲವು ವಸ್ತುಗಳ ಮೇಲಿನ ಜಿಎಸ್ಟಿ ದರಗಳು ಇನ್ನೂ ಹೆಚ್ಚೇ ಇವೆ ಎಂದು ಅವರು ಹೇಳಿದ್ದಾರೆ.
Latest Videos

