ಊಹಾಪೋಹಗಳಿಗೆ ಕೊನೆಗೂ ತೆರೆ: ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸಚಿವ ಸತೀಶ್​​ ಜಾರಕಿಹೊಳಿ

Updated on: Jul 14, 2026 | 3:29 PM

Karnataka Politics: ಸಚಿವ ಸತೀಶ್ ಜಾರಕಿಹೊಳಿ ಅವರು ಸಿದ್ಧರಾಮಯ್ಯರೊಂದಿಗಿನ ಭಿನ್ನಾಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ರಾಜ್ಯದ ಸಮಸ್ಯೆಯಲ್ಲ, ಬದಲಾಗಿ ತಮ್ಮ ಆಂತರಿಕ ವಿಷಯ ಎಂದವರು ಸ್ಪಷ್ಟಪಡಿಸಿದ್ದಾರೆ. ಆರ್‌ಎಸ್‌ಎಸ್ ನೋಂದಣಿ, ಬೆಳಗಾವಿ ರಾಜಕೀಯದ ಆಕಾಂಕ್ಷಿಗಳು ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಕುರಿತೂ ಅವರು ಈ ವೇಳೆ ಮಾತನಾಡಿದ್ದಾರೆ.

ಹಾವೇರಿ, ಜುಲೈ 14: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ಮೇಲಿಂದ ಮೇಲೆ ಊಹಾಪೋಹಗಳು ಕೇಳಿಬರುತ್ತಿದ್ದವು. ಈ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸತೀಶ್​​, ಸಿದ್ಧರಾಮಯ್ಯರೊಂದಿಗೆ ತಮಗಿರುವ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ಇದೇನು ರಾಜ್ಯದ ಸಮಸ್ಯೆಯಲ್ಲ, ತಮ್ಮ ಆಂತರಿಕ ವಿಷಯ ಎಂದೂ ಈ ವೇಳೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us