ಡಿಕೆ ಸಹೋದರರ ದೈತ್ಯಶಕ್ತಿ ಎದುರು ಸೆಣಸುವುದು ಕಷ್ಟ: ಸಿಪಿ ಯೋಗೇಶ್ವರ, ಬಿಜೆಪಿ ನಾಯಕ

ಅರುಣ್​ ಕುಮಾರ್​ ಬೆಳ್ಳಿ

Updated on: Jun 01, 2024 | 2:49 PM

ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಹೊಂದಿರುವುದರಿಂದ ತಮ್ಮನ ಗೆಲುವಿಗೆ ಅಧಿಕಾರದ ಸದುಪಯೋಗ ಮತ್ತು ದುರುಪಯೋಗ ಎರಡೂ ಮಾಡಿಕೊಂಡಿರುತ್ತಾರೆ. ಅಫ್ ದಿ ರೆಕಾರ್ಡ್ ಹೇಳಿಕೊಂಡಿರುವಂತೆ ₹ 450-500 ಕೋಟಿ ಹಣವನ್ನು ಚುನಾವಣೆಯಲ್ಲಿ ಖರ್ಚುಮಾಡಿದ್ದಾರೆ ಎಂದು ಯೋಗೇಶ್ವರ್ ಹೇಳಿದರು.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಪರ ಪ್ರಚಾರ ಮಾಡುವಾಗ ಗೆಲುವು ನಮ್ಮದೇ ಎಂದು ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಇವತ್ತಿನ ಮಾತುಗಳಲ್ಲಿ ನಿರಾಶೆ, ಹತಾಶೆ ಇಣುಕುತಿತ್ತು. ಡಾ ಮಂಜುನಾಥ್ ಗೆಲ್ಲುವ ಬಗ್ಗೆ ಆಶಾಭಾವನೆ ವ್ಯಕ್ತಪಡಿಸುತ್ತಾರಾದರೂ, ಡಿಕೆ ಸಹೋದರರ ಹಣಬಲ, ಜನಬಲ ಮತ್ತು ಅಧಿಕಾರ ಬಲದ ವಿರುದ್ಧ ಸೆಣಸುವುದು ಅಲೆಗಳಿಗೆ ಎದುರಾಗಿ ಈಜಿದಂತೆ ಎಂಬರ್ಥದಲ್ಲಿ ಮಾತಾಡುತ್ತಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಸಹೋದರರು ದೈತ್ಯಶಕ್ತಿ ಎಂದು ಹೇಳುವ ಯೋಗೇಶ್ವರ್ ತಮ್ಮ ಊಹೆಗೆ ಮೀರಿದ ಫಲಿತಾಂಶ ಬಂದರೆ ಅದು ವಿರೋಜಿಯ ಗೆಲುವಿ ಅನಿಸಿಕೊಳ್ಳಲಿದೆ ಅನ್ನುತ್ತಾರೆ. ಡಿಕೆ ಸಹೋದರರು ಮತದಾನದ ಹಿಂದಿನ ದಿನ ಮಹಿಳೆಯರ ಖಾತೆಗಳಿಗೆ ₹ 2,000 ಹಾಕಿರುವುದರಿಂದ ಅವ ವೋಟಗಳ ಬಿಜೆಪಿಗೆ ಬಿದ್ದಿರಲಾರವು. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಹೊಂದಿರುವುದರಿಂದ ತಮ್ಮನ ಗೆಲುವಿಗೆ ಅಧಿಕಾರದ ಸದುಪಯೋಗ ಮತ್ತು ದುರುಪಯೋಗ ಎರಡೂ ಮಾಡಿಕೊಂಡಿರುತ್ತಾರೆ. ಅಫ್ ದಿ ರೆಕಾರ್ಡ್ ಹೇಳಿಕೊಂಡಿರುವಂತೆ ₹ 450-500 ಕೋಟಿ ಹಣವನ್ನು ಚುನಾವಣೆಯಲ್ಲಿ ಖರ್ಚುಮಾಡಿದ್ದಾರೆ ಎಂದು ಯೋಗೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಿಕೆ ಸುರೇಶ್ ಗೆಲುವಿಗೆ ಸಹಾಯ ಮಾಡಿದ್ದೆ: ಸತ್ಯ ಬಾಯಿಬಿಟ್ಟ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.