ದಕ್ಷಿಣ ಕನ್ನಡ: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು! ಇಲ್ಲಿದೆ ವಿಡಿಯೋ

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 04, 2024 | 8:15 AM

ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ನಡೆದಿದೆ. ವಾಹನಗಳನ್ನು ಬದಿಗೆ ದೂಡಿ ಹಾಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,  ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗಿದೆ.

ದಕ್ಷಿಣ ಕನ್ನಡ, ಏ.04: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ. ರಥ ಹೋಗುವ ದಾರಿಯಲ್ಲಿ ವಾಹನಗಳನ್ನ ಪಾರ್ಕ್  ಮಾಡಲಾಗಿತ್ತು. ಈ ವೇಳೆ ರಥ ಹೋಗಲು ದಾರಿ ಮಾಡುವ ಸಲುವಾಗಿ ಭಕ್ತರು, ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್‌ಗಳನ್ನು ಬದಿಗೆ ದೂಡಿ ಹಾಕಿದ್ದಾರೆ. ವಾಹನಗಳನ್ನು ಬದಿಗೆ ದೂಡಿ ಹಾಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,  ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on