ಲೋಕಸಭೆ ಚುನಾವಣೆ 2024: ಖುದ್ದು ಫೀಲ್ಡ್ಗೆ ಇಳಿದು ಚೆಕ್ಪೋಸ್ಟ್ಗಳಲ್ಲಿ ಪರಿಶೀಲನೆ ನಡೆಸಿದ ಎಸ್ಪಿ, ಡಿಸಿ
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೆಪಾಳ್ಯ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಖುದ್ದು ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ಗಳನ್ನು ತಪಾಸಣೆ ನಡೆಸಿದರು. ಪ್ರತಿಯೊಂದು ವಾಹನಗಳನ್ನು ತಪ್ಪದೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕಸಭಾ ಚುನಾವಣಾ (Lok Sabha Election) ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಅಕ್ರಮಕ್ಕೆ ಬ್ರೇಕ್ ಹಾಕಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಚೆಕ್ಪೋಸ್ಟ್ ಹಾಕಲಾಗಿದೆ. ತುಮಕೂರು (Tumakur) ಜಿಲ್ಲೆಯ ಕುಣಿಗಲ್ (Kunigal) ತಾಲೂಕಿನ ಅಂಚೆಪಾಳ್ಯ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಖುದ್ದು ವಾಹನಗಳನ್ನು ಪರಿಶೀಲಿಸಿದರು. ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ಗಳನ್ನು ತಪಾಸಣೆ ನಡೆಸಿದರು. ಬಳಿಕ ಪ್ರತಿಯೊಂದು ವಾಹನಗಳನ್ನು ತಪ್ಪದೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.90 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ. ಬಾದಾಮಿ ತಾಲೂಕಿನ ಜಾಲಿಹಾಳ ಚೆಕ್ಪೋಸ್ಟ್ ಒಂದರಲ್ಲೇ 2.90 ಲಕ್ಷ ರೂ. ಮತ್ತು ಬೂದನಗುಡ್ಡ ರೋಡ್ ಚೆಕ್ಪೋಸ್ಟ್ನಲ್ಲಿ 1 ಲಕ್ಚ ರೂ. ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದರು. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ 1,536 ರೇಷ್ಮೆ ಸೀರೆಗಳು ಅಧಿಕಾರಿಗಳು ಜಪ್ತಿ ಮಾಡಿದ್ದರು. ಹುಬ್ಬಳ್ಳಿ ವಾಣಿಜ್ಯ ತೆರಿಗೆ ಜಾರಿ ವಿಭಾಗದ ಜಂಟಿ ಆಯುಕ್ತ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
