AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ 2024: ಖುದ್ದು ಫೀಲ್ಡ್​ಗೆ ಇಳಿದು ಚೆಕ್​​ಪೋಸ್ಟ್​​ಗಳಲ್ಲಿ ಪರಿಶೀಲನೆ ನಡೆಸಿದ ಎಸ್​ಪಿ, ಡಿಸಿ

ಲೋಕಸಭೆ ಚುನಾವಣೆ 2024: ಖುದ್ದು ಫೀಲ್ಡ್​ಗೆ ಇಳಿದು ಚೆಕ್​​ಪೋಸ್ಟ್​​ಗಳಲ್ಲಿ ಪರಿಶೀಲನೆ ನಡೆಸಿದ ಎಸ್​ಪಿ, ಡಿಸಿ

ವಿವೇಕ ಬಿರಾದಾರ
|

Updated on: Apr 06, 2024 | 11:47 AM

Share

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೆಪಾಳ್ಯ ಚೆಕ್​ಪೋಸ್ಟ್​​ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್​​ ಹಾಗೂ ಎಸ್​​ಪಿ ಅಶೋಕ್​​ ಕೆವಿ ಭೇಟಿ ನೀಡಿ ಖುದ್ದು ಕಾರು ಹಾಗೂ ಕೆಎಸ್ಆರ್​​ಟಿಸಿ ಬಸ್​ಗಳನ್ನು ತಪಾಸಣೆ ನಡೆಸಿದರು. ಪ್ರತಿಯೊಂದು ವಾಹನಗಳನ್ನು ತಪ್ಪದೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣಾ (Lok Sabha Election) ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಅಕ್ರಮಕ್ಕೆ ಬ್ರೇಕ್​ ಹಾಕಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಚೆಕ್​​ಪೋಸ್ಟ್​​ ಹಾಕಲಾಗಿದೆ. ತುಮಕೂರು (Tumakur) ಜಿಲ್ಲೆಯ ಕುಣಿಗಲ್ (Kunigal) ತಾಲೂಕಿನ ಅಂಚೆಪಾಳ್ಯ ಚೆಕ್​ಪೋಸ್ಟ್​​ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್​​ ಹಾಗೂ ಎಸ್​​ಪಿ ಅಶೋಕ್​​ ಕೆವಿ ಭೇಟಿ ನೀಡಿ ಖುದ್ದು ವಾಹನಗಳನ್ನು ಪರಿಶೀಲಿಸಿದರು. ಕಾರು ಹಾಗೂ ಕೆಎಸ್ಆರ್​​ಟಿಸಿ ಬಸ್​ಗಳನ್ನು ತಪಾಸಣೆ ನಡೆಸಿದರು. ಬಳಿಕ ಪ್ರತಿಯೊಂದು ವಾಹನಗಳನ್ನು ತಪ್ಪದೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.90 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ. ಬಾದಾಮಿ ತಾಲೂಕಿನ ಜಾಲಿಹಾಳ ಚೆಕ್​ಪೋಸ್ಟ್​ ಒಂದರಲ್ಲೇ 2.90 ಲಕ್ಷ ರೂ. ಮತ್ತು ಬೂದನಗುಡ್ಡ ರೋಡ್ ಚೆಕ್​ಪೋಸ್ಟ್​ನಲ್ಲಿ 1 ಲಕ್ಚ ರೂ. ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದರು. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ 1,536 ರೇಷ್ಮೆ ಸೀರೆಗಳು ಅಧಿಕಾರಿಗಳು ಜಪ್ತಿ ಮಾಡಿದ್ದರು. ಹುಬ್ಬಳ್ಳಿ ವಾಣಿಜ್ಯ ತೆರಿಗೆ ಜಾರಿ ವಿಭಾಗದ ಜಂಟಿ ಆಯುಕ್ತ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us