ತುಮಕೂರು: ಇವಿಎಂ ಮಷಿನ್ ಕುರಿತ ತರಬೇತಿಯಲ್ಲಿ ಊಟ, ನೀರಿಲ್ಲದೆ ಅಧಿಕಾರಿಗಳ ಪರದಾಟ

ಮಹೇಶ್ ಇ, ಭೂಮನಹಳ್ಳಿ Edited By: ಕಿರಣ್ ಹನುಮಂತ್​ ಮಾದಾರ್

Updated on: Apr 21, 2024 | 6:50 PM

ಬೆಂಗಳೂರಿನಲ್ಲಿ ಚುನಾವಣೆಯ ತರಬೇತಿ ವೇಳೆ ಅವ್ಯವಸ್ಥೆ ಆರೋಪ ಕೇಳಿಬಂದ ಬೆನ್ನಲ್ಲೇ ಇದೀಗ ತುಮಕೂರು (Tumakuru) ಜಿಲ್ಲೆಯ ತಿಪಟೂರಿನ ಸರ್ಕಾರಿ ಡಿಗ್ರಿ‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಟ್ರೈನಿಂಗ್‌ ವೇಳೆ ಊಟ, ತಿಂಡಿ ಕನಿಷ್ಟ ನೀರು ಕೂಡ ನೀಡದೆ ಅಧಿಕಾರಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ತುಮಕೂರು, ಏ.21: ಲೋಕಸಭಾ ಚುನಾವಣೆ ಹಿನ್ನಲೆ ಇವಿಎಂ ಮಷಿನ್‌ಗಳ ಕುರಿತು ಅಧಿಕಾರಿಗಳಿಗೆ ತುಮಕೂರು (Tumakuru) ಜಿಲ್ಲೆಯ ತಿಪಟೂರಿನ ಸರ್ಕಾರಿ ಡಿಗ್ರಿ‌ ಕಾಲೇಜಿನಲ್ಲಿ ತರಬೇತಿ ನೀಡಲಾಗುತ್ತಿದೆ. ಜೊತೆಗೆ ಟ್ರೈನಿಂಗ್‌ (Training)ಗಾಗಿ ಸುಮಾರು 600ಕ್ಕೂ‌ ಹೆಚ್ಚು ಅಧಿಕಾರಿಗಳನ್ನ ಕರೆಸಿದ್ದರು. ಆದರೆ, ತರಬೇತಿ ವೇಳೆ ಊಟ,ತಿಂಡಿ ಕನಿಷ್ಟ ನೀರು ಸಹ ಕೊಡದೆ ತಾಲೂಕು ಚುನಾವಣಾಧಿಕಾರಿ ಸತಾಯುಸುತ್ತಿರುವ ಘಟನೆ ನಡೆದಿದೆ. ಇವಿಎಂ ಯಂತ್ರಗಳ ಬಗ್ಗೆ ಅಧಿಕಾರಿಗಳಿಗೆ ಟ್ರೈನಿಂಗ್ ಕೊಡಬೇಕಾಗಿತ್ತು. ಆದ್ರೆ, ಟ್ರೈನಿಂಗ್‌ನಲ್ಲಿ ಬೆಳಗ್ಗೆಯಿಂದಲೂ ಇವಿಎಂ ಮಷಿನ್‌ಗಳೇ ಇಲ್ಲ. ಇತ್ತ ಬೆಳಗ್ಗೆಯಿಂದ ಊಟ,, ನೀರು ಇಲ್ಲದೆ ಅಧಿಕಾರಿಗಳು ಪರದಾಟ ನಡೆಸಿದ್ದಾರೆ. ಇನ್ನು ತಾಲೂಕು ಚುನಾವಣಾಧಿಕಾರಿ ಸ್ಥಳಕ್ಕೆ ಬಂದರೂ ಕೂಡ ತಲೆ ಕ್ಯಾರೆ ಎಂದಿಲ್ಲ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ

Published on: Apr 21, 2024 06:48 PM
Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...