ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಸಹೋದರರಿಬ್ಬರ ಮೇಲೆ ಹಲ್ಲೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 19, 2024 | 8:01 PM

ಬಾಗಲಕೋಟೆ(Bagalakote) ‌ಜಿಲ್ಲೆಯ ಬಾದಾಮಿಯಲ್ಲಿ ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ನ್ನು ಜ್ಯುವೆಲ್ಲರಿ ಶಾಫ್​ಗೆ ಬಂದು ಆನಂದ್​ನನ್ನು ಕರೆದೊಯ್ಯುವ‌ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗಲಕೋಟೆ, ಏ.19: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ(Bagalakote) ‌ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ. ಆನಂದ ರೇವಣಕರ್ ಹಾಗೂ ಪ್ರಶಾಂತ್​ ರೇವಣಕರ್ ಹಲ್ಲೆಗೊಳಗಾದವರು. ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಕಾರೊಂದನ್ನು ನಡು ರಸ್ತೆಯಲ್ಲಿ ನಿಲ್ಲಿಸಿದ್ದರು. ಈ ಹಿನ್ನಲೆ ಪಕ್ಕಕ್ಕೆ ನಿಲ್ಲಿಸಿ ಎಂದ ಹಿನ್ನಲೆ ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಕೂಡಲೇ ಸಹೋದರರು ಸ್ಥಳೀಯ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆದು ವಾಪಾಸ್ಸಾಗಿದ್ದಾರೆ. ಇನ್ನು ಜ್ಯುವೆಲ್ಲರಿ ಶಾಫ್​ಗೆ ಬಂದು ಆನಂದ್​ನನ್ನು ಕರೆದೊಯ್ಯುವ‌ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Fri, 19 April 24

Follow us on