ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಸಹೋದರರಿಬ್ಬರ ಮೇಲೆ ಹಲ್ಲೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Apr 19, 2024 | 8:01 PM

ಬಾಗಲಕೋಟೆ(Bagalakote) ‌ಜಿಲ್ಲೆಯ ಬಾದಾಮಿಯಲ್ಲಿ ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ನ್ನು ಜ್ಯುವೆಲ್ಲರಿ ಶಾಫ್​ಗೆ ಬಂದು ಆನಂದ್​ನನ್ನು ಕರೆದೊಯ್ಯುವ‌ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗಲಕೋಟೆ, ಏ.19: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ(Bagalakote) ‌ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ. ಆನಂದ ರೇವಣಕರ್ ಹಾಗೂ ಪ್ರಶಾಂತ್​ ರೇವಣಕರ್ ಹಲ್ಲೆಗೊಳಗಾದವರು. ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಕಾರೊಂದನ್ನು ನಡು ರಸ್ತೆಯಲ್ಲಿ ನಿಲ್ಲಿಸಿದ್ದರು. ಈ ಹಿನ್ನಲೆ ಪಕ್ಕಕ್ಕೆ ನಿಲ್ಲಿಸಿ ಎಂದ ಹಿನ್ನಲೆ ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಕೂಡಲೇ ಸಹೋದರರು ಸ್ಥಳೀಯ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆದು ವಾಪಾಸ್ಸಾಗಿದ್ದಾರೆ. ಇನ್ನು ಜ್ಯುವೆಲ್ಲರಿ ಶಾಫ್​ಗೆ ಬಂದು ಆನಂದ್​ನನ್ನು ಕರೆದೊಯ್ಯುವ‌ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Apr 19, 2024 08:00 PM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More